ಬೆಂಗಳೂರು: ಕೆಆರ್ ಪುರಂನಲ್ಲಿ ಹೈಟೆನ್ಷನ್ ವೈಯರ್ ಸ್ಪರ್ಶಿಸಿ ಬಾಲಕನೊಬ್ಬ ದಾರುಣ ಸಾವಿಗೀಡಾಗಿರುವ ಘಟನೆ ನಡೆದಿದೆ.
10 ವರ್ಷದ ಅನಂತ್ ಮೃತ ದುರ್ದೈವಿ. ಹೈಟೆನ್ಷನ್ ವೈಯರ್ ಸ್ಪರ್ಶಿಸಿ ಬಾಲಕ ಗಂಭೀರವಾಗಿ ಗಾಯಗೊಂಡಿದ್ದ. ದೇಹದ ಶೇ.90 ರಷ್ಟು ಭಾಗ ಸುಟ್ಟುಹೋಗಿತ್ತು. ಬಾಲಕನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ.
ಮಗನ ಸಾವಿನ ಕುರಿತು ತಾಯಿಗೆ ಕುಟುಂಬಸ್ಥರು ವಿಚಾರ ತಿಳಿಸಿದ್ದಾರೆ. ಆಸ್ಪತ್ರೆ ಮುಂದೆ ತಾಯಿ ಆಕ್ರಂದನ ಮುಗಿಲು ಮುಟ್ಟಿದೆ. ಅನಂತ್ ಸಂಬಂಧಿಕರು ಕಣ್ಣೀರಿಟ್ಟಿದ್ದಾರೆ.
ಬಾಲಕ ನೇಪಾಳ ಮೂಲದವನಾಗಿದ್ದು, ಕಳೆದ ಸೋಮವಾರದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಚಿಕಿತ್ಸೆ ಫಲಿಸದೇ ಇಂದು ಕೊನೆಯುಸಿರೆಳೆದಿದ್ದಾನೆ. ಆದರೆ, ಪೊಲೀಸರು ಇನ್ನೂ ಸ್ಥಳಕ್ಕೆ ಭೇಟಿ ನೀಡಿಲ್ಲ.