10ರ ಮಗಳು, ತಾಯಿ ಪ್ರತ್ಯೇಕ ಕೋಣೆಯಲ್ಲಿ ನೇಣಿಗೆ ಶರಣು – ಪ್ರೀತಿಸಿ ಮದ್ವೆಯಾಗಿದ್ದ ವೈದ್ಯ ದಂಪತಿ

Public TV
1 Min Read

ಬೆಂಗಳೂರು: ಕಳೆದ ವಾರ ನಗರದ ಒಂದು ಕಡೆ ಮಗುವನ್ನು ಮಹಡಿಯಿಂದ ತಳ್ಳಿ ತಾಯಿಯೊಬ್ಬಳು ಕೊಲೆ ಮಾಡಿದ್ದಳು. ಈಗ ಬನಶಂಕರಿಯಲ್ಲಿ ತಾಯಿಯೊಬ್ಬಳು ಮಗುವಿಗೆ ನೇಣು ಹಾಕಿ ತಾನು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈ ಸುದ್ದಿಗೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ.

ಸೈಮಾ ನಾರಾಯಣ್ ಆತ್ಮಹತ್ಯೆ ಮಾಡಿಕೊಂಡ ದಂತ ವೈದ್ಯೆ. ತನ್ನ 10 ವರ್ಷದ ಮಗಳು ಆರಾಧನಾಗೆ ಮನೆಯಲ್ಲೇ ನೇಣು ಹಾಕಿ ಹತ್ಯೆ ಮಾಡಿದ ಬಳಿಕ ಸೈಮಾ ತಾನು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಪ್ರಸ್ತುತ ಪೊಲೀಸರು ಸೈಮಾ ಪತಿ ನಾರಾಯಣ್ ಅವರನ್ನು ವಿಚಾರಣೆ ಮಾಡುತ್ತಿದ್ದಾರೆ. ಕೌಟುಂಬಿಕ ಕಲಹವೇ ಆತ್ಮಹತ್ಯೆಗೆ ಕಾರಣವಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಗ್ರಾಮಕ್ಕೆ ರಸ್ತೆ, ವಿದ್ಯುತ್ ಸಂಪರ್ಕ ಕಲ್ಪಿಸಿ – ಡಿಸಿಗೆ ಮನವಿ ಮಾಡಿದ ಪುಟ್ಟ ಬಾಲಕಿ 

ವಿರಾಜಪೇಟೆ ಮೂಲದ ಪತ್ನಿ ಸೈಮಾ ಮುತ್ತಪ್ಪ, ಕೋಲಾರ ಮೂಲದ ಪತಿ ನಾರಾಯಣ್ ಕಳೆದ 10 ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ದಂಪತಿ ಡೆಂಟಲ್ ಡಾಕ್ಟರ್ ಆಗಿದ್ದರು. ನಾರಾಯಣ್ ಮತ್ತು ಸೈಮಾ ಇಬ್ಬರು ಒಟ್ಟಿಗೆ ಆಸ್ಪತ್ರೆಯನ್ನು ನಡೆಸುತ್ತಿದ್ದರು. ಎರಡು ದಿನಗಳ ಹಿಂದೆ ನಾರಾಯಣ್ ಮನೆಯಲ್ಲಿ ಇರಲಿಲ್ಲ. ಈ ವೇಳೆ ಸೈಮಾ ಮತ್ತು ಮಗಳು ಮನೆಯಲ್ಲಿನ ಪ್ರತ್ಯೇಕ ಕೋಣೆಗಳಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಎರಡು ದಿನಗಳ ಬಳಿಕ ನಾರಾಯಣ್ ಮನೆಗೆ ಬಂದು ನೋಡಿದ ಮೇಲೆ ಘಟನೆ ಬೆಳಕಿಗೆ ಬಂದಿದೆ. ಈ ದೃಶ್ಯವನ್ನು ನೋಡಿ ತಾಯಿಯೇ ಮಗಳನ್ನು ನೇಣಿಗೆ ಹಾಕಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಇಬ್ಬರು ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವುದು ತನಿಖೆಯಾಗಬೇಕಿದೆ. ಇದನ್ನೂ ಓದಿ: ಮಗಳನ್ನು ನೇಣಿಗೆ ಹಾಕಿ ಆತ್ಮಹತ್ಯೆಗೆ ಶರಣಾದ ದಂತ ವೈದ್ಯೆ

ವಿಷಯ ತಿಳಿದ ತಕ್ಷಣ ಆಸ್ಟ್ರೇಲಿಯಾದಲ್ಲಿದ್ದ ಸೈಮಾ ಸಹೋದರ ಬೆಂಗಳೂರಿಗೆ ಬಂದಿದ್ದಾರೆ. ಇಂದು ಪೊಲೀಸರಿಗೆ ದೂರು ನೀಡಿದ್ದು, ಇವರ ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *