10ರ ಬಾಲಕಿಯನ್ನ ದೇವದಾಸಿ ಪದ್ಧತಿಗೆ ತಳ್ಳಿದ ಪೋಷಕರು- ಮಕ್ಕಳ ಸಹಾಯವಾಣಿಯಿಂದ ಅಪ್ರಾಪ್ತೆಯ ರಕ್ಷಣೆ

Public TV
1 Min Read

ಕಲಬುರಗಿ: ಹತ್ತು ವರ್ಷದ ಬಾಲಕಿಯನ್ನ ದೇವದಾಸಿ ಪದ್ಧತಿಗೆ ತಳ್ಳಿದ ಘಟನೆ ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಮಾವಿನಸೂರ ಗ್ರಾಮದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಐದು ವರ್ಷದ ಹಿಂದೆ ಬಾಲಕಿಯನ್ನು ಆಕೆಯ ತಂದೆ ಶರಣಪ್ಪ ಮತ್ತು ತಾಯಿ ಬಿಜಲಿಬಾಯಿ ದೇವರ ಹೆಸರಿನಲ್ಲಿ ದೇವದಾಸಿಯನ್ನಾಗಿ ಮಾಡಿದ್ದರು. ಇದರ ಖಚಿತ ಮಾಹಿತಿ ಪಡೆದ ಮಕ್ಕಳ ಸಹಾಯವಾಣಿ ಸದಸ್ಯರು ದಾಳಿ ಮಾಡಿ ಪ್ರಕರಣ ಬೇಧಿಸಿದ್ದಾರೆ. ಪ್ರಕರಣ ಸಂಬಂಧ ದೇವಸ್ಥಾನದ ಅರ್ಚಕ ಶರಣಪ್ಪ ಮತ್ತು ಪೋಷಕರನ್ನು ಬಂಧಿಸಲಾಗಿದೆ.

ಈ ಬಗ್ಗೆ ಅರ್ಚಕನನ್ನು ವಿಚಾರಿಸಿದಾಗ 1 ಸಾವಿರಕ್ಕೂ ಅಧಿಕ ಯುವತಿಯರನ್ನು ದೇವದಾಸಿಯರನ್ನಾಗಿ ಮಾಡಿರುವುದಾಗಿ ಹೇಳಿದ್ದಾನೆ. ಹೀಗೆ ದೇವದಾಸಿ ಹೆಸರಿನಲ್ಲಿ ಸದ್ಯ ಕಲಬುರಗಿ ಜಿಲ್ಲೆಯಲ್ಲಿ 10 ಸಾವಿರಕ್ಕೂ ಅಧಿಕ ಹೆಣ್ಣುಮಕ್ಕಳು ವೇಶ್ಯಾವಾಟಿಕೆಯಲ್ಲಿ ತೊಡಗಿರುವದು ಬೆಳಕಿಗೆ ಬಂದಿದೆ.

ಈ ಸಂಬಂಧ ಕಾಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *