ಹಾವೇರಿ ಗೋಲಿಬಾರ್ ನಡೆದು ಇಂದಿಗೆ 10 ವರ್ಷ- ಇನ್ನೂ ರೈತರಿಗೆ ಸಿಕ್ಕಿಲ್ಲ ಸೂಕ್ತ ಪರಿಹಾರ

Public TV
1 Min Read

ಹಾವೇರಿ: ರೈತ ದೇಶದ ಬೆನ್ನೆಲುಬು. ಆತ ನಮಗೆ ಅನ್ನವನ್ನು ನೀಡುವ ಅನ್ನದಾತ. ಹಾಗಾಗಿ ಹಾವೇರಿಯಲ್ಲಿ ರಸಗೊಬ್ಬರ ಕೇಳಿದ ರೈತರ ಮೇಲೆ ಗೋಲಿಬಾರ್ ನಡೆಸಿ ಇಂದಿಗೆ 10 ವರ್ಷ ಆಯ್ತು.

ಜೂನ್ 10 2008 ರಂದು ಹಾವೇರಿ ಜಿಲ್ಲೆಯಲ್ಲಿ ರಸಗೊಬ್ಬರಕ್ಕಾಗಿ ರೈತರು ಗಲಾಟೆ ಮಾಡಿದ್ದರು. ರೈತರ ಮೇಲೆ ಪೊಲೀಸರು ಗೋಲಿಬಾರ್ ನಡೆಸಿದ್ದರು. ಆ ವೇಳೆಗೆ ಸಿದ್ದಲಿಂಗಪ್ಪ ಚೂರಿ ಮತ್ತು ನೆಲೋಗಲ್ಲ ಗ್ರಾಮದ ರೈತ ಪುಟ್ಟಪ್ಪ ಹೊನ್ನತ್ತಿ ಗುಂಡೇಟಿಗೆ ಬಲಿಯಾಗಿದ್ದರು.

ನ್ಯಾಯ ಕೊಡಿಸಬೇಕಾದ ಆಯೋಗವೇ ರೈತರನ್ನು ಗೂಂಡಾಗಳು ಅಂತಾ ವರದಿ ನೀಡಿತ್ತು. ಆದ್ರೆ ಈ ವರದಿಯನ್ನು ರಾಜ್ಯ ಸರ್ಕಾರ ಬಹಿರಂಗ ಮಾಡಿಲ್ಲ. ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ 50 ಸಾವಿರ ರೂಪಾಯಿ ಪರಿಹಾರ ಕೊಟ್ಟು ಕೈತೊಳೆದುಕೊಂಡಿದ್ದು ಬಿಟ್ಟರೆ ಸೂಕ್ತ ಪರಿಹಾರ ಮಾತ್ರ ಇನ್ನೂ ಸಿಕ್ಕಿಲ್ಲ.

  

Share This Article
Leave a Comment

Leave a Reply

Your email address will not be published. Required fields are marked *