100 ಸಿಬ್ಬಂದಿಯನ್ನು ಕೊರೊನಾ ಕರ್ತವ್ಯಕ್ಕೆ ಕಳುಹಿಸಿದ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ

Public TV
1 Min Read

ಚಾಮರಾಜನಗರ: ಕೊರೊನಾ ಕರ್ತವ್ಯಕ್ಕೆ ಸಿಬ್ಬಂದಿ ಕಳುಹಿಸಲು ಜಿಲ್ಲಾಡಳಿತದ ಮನವಿಗೆ ಸ್ಪಂದಿಸಿದ ಮಲೆ ಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ ತಮ್ಮ 100 ಮಂದಿ ಸಿಬ್ಬಂದಿಯನ್ನು ಕೋವಿಡ್ ಕರ್ತವ್ಯಕ್ಕೆ ಕಳುಹಿಸಿದ್ದಾರೆ.

ದೇವಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದವರು ಈಗ ಕೊರೊನಾ ವಾರಿಯರ್‍ಗಳಾಗಿ ಫೀಲ್ಡಿಗಿಳಿದಿದ್ದು, ಸೋಂಕಿತರ ಆರೈಕೆ ಜೊತೆಗೆ ಕೊರೊನಾ ಸಮರೋಪಾದಿ ಕಾರ್ಯದಲ್ಲೇ ಇವರು ದೇವರನ್ನು ಕಾಣುತ್ತಿದ್ದಾರೆ. ಮಲೆಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ ತಮ್ಮ 100 ಮಂದಿ ಸಿಬ್ಬಂದಿಯನ್ನು ಕೋವಿಡ್ ಕರ್ತವ್ಯಕ್ಕೆ ಕಳುಹಿಸಿದ್ದಾರೆ. ದೇಗುಲದಲ್ಲಿ ಕೆಲಸ ಮಾಡುತ್ತಿದ್ದ ಇವರು ಈಗ ಮಹಾಮಾರಿ ವಿರುದ್ಧ ಹೋರಾಡುತ್ತಿದ್ದಾರೆ.

ಕೋವಿಡ್ ಆಸ್ಪತ್ರೆಗಳಲ್ಲಿ ಹಾಗೂ ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಸ್ವಚ್ಛತೆ ಮತ್ತು ಸೆಕ್ಯೂರಿಟಿ ಕೆಲಸಗಳನ್ನು ಮಾಡುತ್ತಿದ್ದಾರೆ. ಸಿಬ್ಬಂದಿ ಮಾಡುತ್ತಿರುವುದು ಪುಣ್ಯದ ಕೆಲಸ ಎಂದು ಜಯವಿಭವಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ. ಮುಂದೆಯೂ ಕೊರೊನಾ ಕರ್ತವ್ಯಕ್ಕೆ ಅಗತ್ಯ ಬಿದ್ದಲ್ಲಿ ಜಿಲ್ಲಾಡಳಿತದಕರೆಗೆ ಓಗೊಡಲಿದ್ದೇವೆ ಎಂದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *