ರಾಜ್ಯದಲ್ಲಿ ಕೊರೊನಾ ಏರಿಳಿತ – ಇಂದು 1,151 ಮಂದಿಗೆ ಸೋಂಕು

Public TV
1 Min Read

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಆಗುತ್ತಿದ್ದು, ಇಂದು 1,151 ಮಂದಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ. ಇಂದು ಯಾವುದೇ ಮರಣ ಪ್ರಕರಣ ದಾಖಲಾಗಿಲ್ಲ.

ಇಂದು ರಾಜ್ಯದಲ್ಲಿ 837 ಮಂದಿ ಕೊರೊನಾದಿಂದ ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೆ 39,46,484 ಮಂದಿ ಕೊರೊನಾದಿಂದ ಚೇತರಿಸಿಕೊಂಡಿದ್ದಾರೆ. ಇಂದು 25,481 ಮಂದಿಯನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದರೊಂದಿಗೆ ಇಲ್ಲಿಯವರೆಗೆ 6,76,03,595 ಮಂದಿಯನ್ನು ಟೆಸ್ಟ್ ಮಾಡಲಾಗಿದೆ. ಇದನ್ನೂ ಓದಿ: ಬಿಎಸ್‌ವೈ ರಾಜಕೀಯದಿಂದ ಹಿಂದೆ ಸರಿಯಲ್ಲ, ಅವರು ಆ ರೀತಿ ಹೇಳಿಲ್ಲ: ಬಿ.ಸಿ ನಾಗೇಶ್ ಸಮರ್ಥನೆ

ಕೋವಿಡ್‌ನಿಂದ ಇಂದು ಯಾವುದೇ ಸಾವು ಪ್ರಕರಣ ವರದಿಯಾಗಿಲ್ಲ. ಇದುವರೆಗೆ 40,090 ಮಂದಿ ಮಹಾಮಾರಿಯಿಂದ ಜೀವ ಕಳೆದುಕೊಂಡಿದ್ದಾರೆ. ಇಂದಿನ ಪಾಸಿಟಿವಿಟಿ ಶೇ.4.51 ಇದೆ. 9,162 ಸಕ್ರಿಯ ಪ್ರಕರಣಗಳಿವೆ.

ಇಂದು 25,481 ಮಂದಿಯನ್ನು (3,381 ರ‍್ಯಾಪಿಡ್‌ ಆ್ಯಂಟಿಜನ್‌, 22,100 ಆರ್‌ಟಿ-ಪಿಸಿಆರ್‌) ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಅಲ್ಲದೇ ಇಂದು 11,139 ಮಂದಿ ಕೊರೊನಾ ಲಸಿಕೆ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ಯಕ್ಷಗಾನದ ಭಾಗವತಿಕೆ ಮೂಲಕ ರಾಷ್ಟ್ರಪತಿಗೆ ಸ್ವಾಗತ ಕೋರಿದ ಬಾಲೆ

ಇಂದಿನ ಹೆಲ್ತ್ ಬುಲೆಟಿನ್ ಪ್ರಕಾರ, ಬಾಗಲಕೋಟೆ 6, ಬಳ್ಳಾರಿ 17, ಬೆಳಗಾವಿ 15, ಬೆಂಗಳೂರು ಗ್ರಾಮಾಂತರ 9, ಬೆಂಗಳೂರು ನಗರ 910, ಬೀದರ್ 8, ಚಿಕ್ಕಬಳ್ಳಾಪುರ 7, ಚಿಕ್ಕಮಗಳೂರು 3, ದಕ್ಷಿಣ ಕನ್ನಡ 19, ದಾವಣಗೆರೆ 2, ಧಾರವಾಡ 26, ಗದಗ 1, ಹಾಸನ 25, ಕಲಬುರಗಿ 14, ಕೋಲಾರ 5, ಕೊಪ್ಪಳ 1, ಮಂಡ್ಯ 12, ಮೈಸೂರು 24, ರಾಯಚೂರು 7, ಶಿವಮೊಗ್ಗ 6, ತುಮಕೂರು 19, ಉಡುಪಿ 7, ಉತ್ತರ ಕನ್ನಡ 16 ಹಾಗೂ ಚಾಮರಾಜನಗರ, ಚಿತ್ರದುರ್ಗ, ಹಾವೇರಿ, ಕೊಡಗು, ರಾಮನಗರ, ವಿಜಯಪುರ, ಯಾದಗಿರಿಯಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *