ಬೆಂಗಳೂರು: ರಾಜ್ಯದಲ್ಲಿ ನಿನ್ನೆಗಿಂತ ಇಂದು ಕೊರೊನಾ ಪಾಸಿಟಿವ್ ಪ್ರಕರಣ ಇಳಿಕೆ ಕಂಡಿದೆ. ಇಂದು 1,189 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದೆ. 22 ಮಂದಿ ಸಾವನ್ನಪ್ಪಿದ್ದು, 1,456 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲಾವಾರು ವರದಿಯಲ್ಲಿ ದಕ್ಷಿಣ ಕನ್ನಡ 286 ಕೇಸ್ಗಳೊಂದಿಗೆ ಮೊದಲ ಸ್ಥಾನದಲ್ಲಿ ಮುಂದುವರೆದಿದೆ. ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಶೇ.0.94ರಷ್ಟಿದೆ.
ರಾಜ್ಯದಲ್ಲಿ ಒಟ್ಟು 20,556 ಸಕ್ರಿಯ ಪ್ರಕರಣಗಳು ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 29,38,616 ಮಂದಿಗೆ ಕೊರೊನಾ ಬಂದಿದೆ. 28,80,889 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.1.85ರಷ್ಟಿದೆ. ಇದನ್ನೂ ಓದಿ: ಅವನ್ಯಾರೋ ಎಂಪಿ ಬಹಳ ಬುದ್ದಿವಂತ, ಅವನಷ್ಟು ನಾವು ಓದಿಲ್ಲ – ತೇಜಸ್ವಿ ಸೂರ್ಯಗೆ ಡಿಕೆಶಿ ಟಾಂಗ್
ಇಂದು ರಾಜ್ಯದಲ್ಲಿ ಒಟ್ಟು 1,25,158 ಸ್ಯಾಂಪಲ್ (ಆರ್ಟಿ ಪಿಸಿಆರ್ 92,842 + 32,316 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಬೆಂಗಳೂರಿನಲ್ಲಿ ಇಂದು 267 ಮಂದಿಗೆ ಕೊರೊನಾ ಸೋಂಕು ತಗುಲಿದೆ. 300 ಜನ ಇಂದು ಡಿಸ್ಚಾರ್ಜ್ ಆಗಿದ್ದಾರೆ. 2 ಮಂದಿ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ವಿದ್ಯಾರ್ಥಿಗಳು ಒತ್ತಾಯಪೂರ್ವಕವಾಗಿ ಶಾಲೆಗೆ ಬರಬೇಕೆಂದಿಲ್ಲ: ಬಿ.ಸಿ.ನಾಗೇಶ್
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಕಲಬುರಗಿಯಲ್ಲಿ ಶೂನ್ಯ ಪ್ರಕರಣ, ಬಾಗಲಕೋಟೆ 4, ಬಳ್ಳಾರಿ 5, ಬೆಳಗಾವಿ 34, ಬೆಂಗಳೂರು ಗ್ರಾಮಾಂತರ 12, ಬೆಂಗಳೂರು ನಗರ 267, ಬೀದರ್ 3, ಚಾಮರಾಜನಗರ 8, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 50, ಚಿತ್ರದುರ್ಗ 10, ದಕ್ಷಿಣ ಕನ್ನಡ 286, ದಾವಣಗೆರೆ 19, ಧಾರವಾಡ 4, ಗದಗ 2, ಹಾಸನ 75, ಹಾವೇರಿ 1, ಕೊಡಗು 55, ಕೋಲಾರ 8, ಕೊಪ್ಪಳ 1, ಮಂಡ್ಯ 19, ಮೈಸೂರು 79, ರಾಯಚೂರು 1, ರಾಮನಗರ 5, ಶಿವಮೊಗ್ಗ 24, ತುಮಕೂರು 39, ಉಡುಪಿ 132, ಉತ್ತರ ಕನ್ನಡ 40, ವಿಜಯಪುರ 2, ಮತ್ತು ಯಾದಗಿರಿಯಲ್ಲಿ 3 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.