ದರ್ಶನ್ & ಗ್ಯಾಂಗ್ ವಿರುದ್ಧ 1200 ಪುಟಗಳ ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಕೆ

Public TV
1 Min Read

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ (Renukaswamy Murder Case) ಸಂಬಂಧಿಸಿದಂತೆ 1300 ಪುಟಗಳ ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ.

ನಟ ದರ್ಶನ್ (Darshan) ಹಾಗೂ ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಿಸಿಹೆಚ್ 57 ನ್ಯಾಯಾಲಯಕ್ಕೆ ಸಲ್ಲಿಕೆಯಾಗಿದೆ. ತನಿಖಾಧಿಕಾರಿ ಎಸಿಪಿ ಚಂದನ್ ಕುಮಾರ್ ನ್ಯಾಯಾಲಯಕ್ಕೆ ಆಗಮಿಸಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದರು. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ‘ಮಹಾಯುತಿ’ಗೆ ಐತಿಹಾಸಿಕ ಗೆಲುವು: ಜನತೆಗೆ ನಿತಿನ್‌ ಗಡ್ಕರಿ ಕೃತಜ್ಞತೆ

ಬರೋಬ್ಬರಿ 1300 ಪುಟಗಳ ಈ ಚಾರ್ಜ್ ಶೀಟ್‌ನಲ್ಲಿ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ, ಕೆಲ ಸಾಕ್ಷ್ಯಗಳ ಹೇಳಿಕೆಗಳು, ಪುನೀತ್ ಮೊಬೈಲ್‌ನಿಂದ ರಿಟ್ರೀವ್ ಮಾಡಲಾದ 8 ಪೋಟೋಗಳು ಸೇರಿದಂತೆ ಮಹತ್ವದ ದಾಖಲೆಗಳನ್ನು ಸೇರಿಸಿ ಸಲ್ಲಿಕೆ ಮಾಡಲಾಗಿದೆ. ಇದನ್ನೂ ಓದಿ: 2028ರ ಚುನಾವಣೆಯ ಗೆಲುವಿಗೆ ಇದು ಮುನ್ನುಡಿ: ಡಿಕೆ ಶಿವಕುಮಾರ್‌

Share This Article