ಶಿವಮೊಗ್ಗ: 14 ಅಡಿ ಉದ್ದದ ಕಾಳಿಂಗನ ರಕ್ಷಣೆ

Public TV
1 Min Read

ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲೂಕು ಚಿಕ್ಕಜೇನಿ ಗ್ರಾಮದ ಸಮೀಪ ಕೊಳವಳ್ಳಿಯ ಚಂದ್ರೇಗೌಡ ಎಂಬವರ ಮನೆ ಸಮೀಪ ಬಂದಿದ್ದ 14 ಅಡಿ ಉದ್ದದ ಕಾಳಿಂಗ ಸರ್ಪವನ್ನು ಉರಗ ತಜ್ಞ ಪ್ರಭಾಕರ್ ಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ.

ಬುಧವಾರ ಸಂಜೆ ಕಂಡು ಬಂದ ಈ ಕಾಳಿಂಗ ಸರ್ಪವನ್ನು ಅರಣ್ಯ ಅಧಿಕಾರಿಗಳ ಸಮ್ಮುಖದಲ್ಲಿ ಪ್ರಭಾಕರ್ ಅವರು ರಕ್ಷಣೆ ಮಾಡಿದ್ದಾರೆ. ಈ ಭಾಗದಲ್ಲಿ ನಾಗರ ಹಾವು ಸಾಮಾನ್ಯವಾಗಿ ಕಂಡು ಬರುತ್ತವೆ. ಆದರೆ ಇತ್ತೀಚಿನ ದಿನಗಳಲ್ಲಿ ವಸತಿ ಪ್ರದೇಶಗಳಲ್ಲೂ ಕಾಳಿಂಗ ಸರ್ಪಗಳು ಕಾಣಿಸಿಕೊಳ್ಳತೊಡಗಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಯಾವುದೇ ತೊಂದರೆ ಕೊಡದಿದ್ದಲ್ಲಿ ಹಾವುಗಳು ತಮ್ಮ ಪಾಡಿಗೆ ತಾವು ಇರುತ್ತವೆ. ಅವುಗಳನ್ನು ಅವುಗಳ ಪಾಡಿಗೆ ಬಿಡಿ ಎಂದು ಪ್ರಭಾಕರ್ ಸ್ಥಳೀಯರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ.

https://youtu.be/RptSU7dGNN4

Share This Article
Leave a Comment

Leave a Reply

Your email address will not be published. Required fields are marked *