ಮದುವೆ ನಿರಾಕರಿಸಿದ್ದಕ್ಕೆ ನೆರೆಮನೆಯವನಿಂದಲೇ 14ರ ಬಾಲಕಿಯ ಕತ್ತು ಹಿಸುಕಿ ಕೊಲೆ

Public TV
1 Min Read

ಲಕ್ನೋ: ಮದುವೆ ಪ್ರಸ್ತಾಪವನ್ನು (marriage proposal) ನಿರಾಕರಿಸಿದ 14 ವರ್ಷದ ಬಾಲಕಿಯ (Girl) ಕತ್ತು ಹಿಸುಕಿ ನೆರೆಮನೆಯವನೇ (Neighbor) ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಮುಜಾಫರ್‌ನಗರದಲ್ಲಿ (Muzaffarnagar) ನಡೆದಿದೆ. ಕೃತ್ಯ ಎಸಗಿದ ಬಳಿಕ ಬಾಲಕಿಯ ಶವವನ್ನು ಕಬ್ಬಿನ ಗದ್ದೆಯಲ್ಲಿ ಎಸೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಆರೋಪಿಯನ್ನು ಸೋನು ಬಂಜಾರ ಎಂದು ಗುರುತಿಸಲಾಗಿದೆ. ಸಂತ್ರಸ್ತೆ ನವೆಂಬರ್ 5 ರಂದು ತನ್ನ ಮನೆಯಿಂದ ನಾಪತ್ತೆಯಾಗಿದ್ದು, ಮರುದಿನ ಹಾಜಿಪುರ ಗ್ರಾಮದ ಹೊಲದಲ್ಲಿ ಆಕೆಯ ಶವ ಪತ್ತೆಯಾಗಿದೆ. ಇದನ್ನೂ ಓದಿ: ನ್ಯೂಸ್ ಪೇಪರ್ ಓದುತ್ತಿದ್ದಂತೆಯೇ ವ್ಯಕ್ತಿ ಸಾವು

CRIME COURT

ತನ್ನ ಮಗಳನ್ನು ಮದುವೆಯಾಗುವಂತೆ ಆರೋಪಿ ಪೀಡಿಸುತ್ತಿದ್ದು, ತನ್ನ ಕುಟುಂಬಕ್ಕೂ ಬೆದರಿಕೆ ಹಾಕಿರುವುದಾಗಿ ಬಾಲಕಿಯ ತಂದೆ ದೂರಿನಲ್ಲಿ ತಿಳಿಸಿದ್ದಾರೆ. ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿದ್ದು, ಆತನನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ವಿನಿತ್ ಜೈಸ್ವಾಲ್ ತಿಳಿಸಿದ್ದಾರೆ. ಇದನ್ನೂ ಓದಿ: ಯುವತಿ ವಿಚಾರಕ್ಕೆ ಗಲಾಟೆ – ರೌಡಿ ಕಾರ್ಪೊರೇಟರ್‌ನಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ವಿನಿತ್ ಜೈಸ್ವಾಲ್ ಹೇಳಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *