ಇಂದು 1,573 ಕೇಸ್, 3 ಸಾವು – ಏಕೈಕ ಜಿಲ್ಲೆಯಲ್ಲಿ ಶೂನ್ಯ ಪ್ರಕರಣ

Public TV
2 Min Read

ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 1,573 ಪಾಸಿಟಿವ್ ಕೇಸ್‌ ಮತ್ತು 3 ಮರಣ ಪ್ರಕರಣ ದಾಖಲಾಗಿದೆ.

ರಾಜ್ಯದಲ್ಲಿ ಕೊರೊನಾ ಏರಿಳಿತದ ನಡುವೆ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 9,777ಕ್ಕೆ ತಲುಪಿದೆ. ರಾಜ್ಯದಲ್ಲಿ ಇಂದು ಬೀದರ್ ಜಿಲ್ಲೆಯಲ್ಲಿ ಯಾವುದೇ ಪಾಸಿಟಿವ್ ಕೇಸ್ ಪತ್ತೆಯಾಗಿಲ್ಲ. ಬೆಂಗಳೂರು ನಗರದಲ್ಲಿ ಇಂದು 935 ಪ್ರಕರಣ ದಾಖಲಾಗಿದೆ. ಜಿಲ್ಲೆಗಳ ಪೈಕಿ ಹಾಸನದಲ್ಲಿ ದಾಖಲಾದ 98 ಕೇಸ್ ಹೆಚ್ಚಿನ ಕೇಸ್ ಆಗಿದೆ. ಇಂದು ಚಾಮರಾಜನಗರ 2 ಮತ್ತು ದಕ್ಷಿಣಕನ್ನಡದಲ್ಲಿ 1 ಸೇರಿ ಒಟ್ಟು 3 ಮರಣ ಪ್ರಕರಣ ದಾಖಲಾಗಿದೆ. ಈವರೆಗೆ ಒಟ್ಟು 40,162 ಮಂದಿ ಕೊರೊನಾಗೆ ಮೃತಪಟ್ಟಿದ್ದಾರೆ. ಇಂದು ರಾಜ್ಯದಲ್ಲಿ 1,100 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇಂದು ಪಾಸಿಟಿವಿಟಿ ರೇಟ್ ಶೇ. 4.91ಕ್ಕೆ ತಲುಪಿದೆ. ಇದನ್ನೂ ಓದಿ: ಧರ್ಮ ಒಡೆಯುವುದು ನನ್ನ ಉದ್ದೇಶವಲ್ಲ, ಕೆಲವರು ನನ್ನನ್ನ ದಾರಿ ತಪ್ಪಿಸಿದ್ರು: ಸಿದ್ದರಾಮಯ್ಯ

 

ಈವರೆಗೆ ರಾಜ್ಯದಲ್ಲಿ ಒಟ್ಟು 40,38,398 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,88,417 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 48,531 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 31,981 ಸ್ಯಾಂಪಲ್ (ಆರ್​ಟಿಪಿಸಿಆರ್ 23,518 + 8,463 ರ್‍ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: 200 ಸಿಬ್ಬಂದಿ ನಿಯೋಜನೆ; ಇನ್ನೂ ಪತ್ತೆಯಾಗಿಲ್ಲ ಚಿರತೆ!

 

ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬಾಗಲಕೋಟೆ 7, ಬಳ್ಳಾರಿ 50, ಬೆಳಗಾವಿ 33, ಬೆಂಗಳೂರು ಗ್ರಾಮಾಂತರ 8, ಬೆಂಗಳೂರು ನಗರ 935, ಬೀದರ್ 0, ಚಾಮರಾಜನಗರ 24, ಚಿಕ್ಕಬಳ್ಳಾಪುರ 14, ಚಿಕ್ಕಮಗಳೂರು 1, ಚಿತ್ರದುರ್ಗ 5, ದಕ್ಷಿಣ ಕನ್ನಡ 20, ದಾವಣಗೆರೆ 14, ಧಾರವಾಡ 34, ಗದಗ 3, ಹಾಸನ 98, ಹಾವೇರಿ 5, ಕಲಬುರಗಿ 9, ಕೊಡಗು 32, ಕೋಲಾರ 27, ಕೊಪ್ಪಳ 3, ಮಂಡ್ಯ 28, ಮೈಸೂರು 86, ರಾಯಚೂರು 20, ರಾಮನಗರ 26, ಶಿವಮೊಗ್ಗ 27, ತುಮಕೂರು 32, ಉಡುಪಿ 7, ಉತ್ತರ ಕನ್ನಡ 17, ವಿಜಯಪುರ 6 ಮತ್ತು ಯಾದಗಿರಿಯಲ್ಲಿ 2 ಪಾಸಿಟಿವ್ ಪ್ರಕರಣ ದಾಖಲಾಗಿದೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *