ಸಕಲೇಶಪುರದಲ್ಲಿ ಅಪಾಯಕ್ಕೆ ಸಿಲುಕಿರೋ 16 ರೈಲ್ವೇ ಸಿಬ್ಬಂದಿ ರಕ್ಷಣೆಗೆ ಕಾರ್ಯಾಚರಣೆ ಆರಂಭ

Public TV
1 Min Read

ಹಾಸನ: ಹೆಲಿಕಾಪ್ಟರ್ ಕಾರ್ಯಾಚರಣೆ ದುಸ್ತರ ಹಿನ್ನೆಲೆ ಅಪಾಯದಲ್ಲಿ ಸಿಲುಕಿರುವ ರೈಲ್ವೇ ಸಿಬ್ಬಂದಿ ರಕ್ಷಿಸಲು ಸಕಲೇಶಪುರ ಎ ಸಿ ನೇತೃತ್ವದ ತಂಡದಿಂದ ಕಾರ್ಯಾಚರಣೆ ಆರಂಭವಾಗಿದೆ.

ಸಕಲೇಶಪುರ ತಾಲ್ಲೂಕಿನ ಎಡಕುಮೇರಿ ಬಳಿ ನಿರಂತರ ಮಳೆಯಿಂದ ಗುಡ್ಡಗಳು ಕುಸಿಯುತ್ತಿವೆ. ಪರಿಣಾಮ 16 ಜನ ರೈಲ್ವೇ ಸಿಬ್ಬಂದಿ ರೈಲ್ವೇ ನಿಲ್ದಾಣದಿಂದ ಹೊರ ಬರಲಾಗದೆ ಅಪಾಯದಲ್ಲಿದ್ದಾರೆ. ಹೀಗಾಗಿ ಹೆಲಿಕಾಪ್ಟರ್ ಮೂಲಕ ರಕ್ಷಣೆ ಮಾಡಲು ರೈಲ್ವೇ ಇಲಾಖೆ ಸರ್ಕಾರಕ್ಕೆ ಮನವಿ ಮಾಡಿತ್ತು. ಆದರೆ ಭಾರೀ ಮಳೆಯಾಗುತ್ತಿರುವುದರಿಂದ ಹೆಲಿಕಾಪ್ಟರ್ ಬಳಕೆ ಅಸಾಧ್ಯವಾಗಿದ್ದು, ಪಶ್ಚಿಮ ಘಟ್ಟದ ಟ್ರೆಕ್ಕಿಂಗ್ ಮಾರ್ಗದ ಮೂಲಕ ಕರೆತರಲು ಕಾರ್ಯಾಚರಣೆ ನಡೆಸಲಾಗುತ್ತಿದೆ.

ಬೆಂಗಳೂರು- ಮಂಗಳೂರು ಸಂಪರ್ಕದ ರೈಲು ಮಾರ್ಗದಲ್ಲಿ ಸಿಲುಕಿರುವ ಎಲ್ಲಾ ಸಿಬ್ಬಂದಿಗಳನ್ನು ರಕ್ಷಿಸಲು ತಂಡ ಕಾಗಿನೆರಿ ಮೂಲಕ ತೆರಳಿದ್ದು, ಮಧ್ಯಾಹ್ನದ ವೇಳೆಗೆ ಅಪಾಯದಲ್ಲಿರುವ ಸಿಬ್ಬಂದಿಗಳನ್ನು ಕರೆತರುವ ನಿರೀಕ್ಷೆ ಇದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *