ಬೆಂಗಳೂರು: ಚಿಕನ್ ತರಲು ಹೋಗುತ್ತಿದ್ದ ಬಾಲಕನಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದು, ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ ವೈಟ್ ಟ್ಯಾಪಿಂಗ್ ನಡೆಯುತ್ತಿದ್ದ ಬಾಗಲೂರು ರಸ್ತೆ ಬಳಿ ಅಪಘಾತ ಸಂಭವಿಸಿದೆ. ವರುಣ್ (16) ಮೃತ ದುರ್ದೈವಿ.
ರಸ್ತೆ ದಾಟುವಾಗ ವೇಗವಾಗಿ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಎಸ್ಎಸ್ಎಲ್ಸಿಯಲ್ಲಿ ಉನ್ನತ ಶ್ರೇಣಿಯಲ್ಲಿ ಪಾಸ್ ಆಗಿದ್ದ.
ಖಾಸಗಿ ಬಸ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೆಣ್ಣೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

