ಈಜಲು ತೆರಳಿ ರಾಜ್ಯ ಮಟ್ಟದ ಕಬಡ್ಡಿ ಪಟು ಸಾವು

Public TV
1 Min Read

ಕಾರವಾರ: ಈಜಲು ತೆರಳಿ ನೀರಿನಲ್ಲಿ ಮುಳುಗಿ ರಾಜ್ಯ ಮಟ್ಟದ ಕಬಡ್ಡಿ ಪಟು ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಕ್ಯಾದಗಿಕೊಪ್ಪ ಗ್ರಾಮದಲ್ಲಿ ನಡೆದಿದೆ.

ಶಶಾಂಕ್ ರವಿ ನಾಯ್ಕ(16) ಭಾನುವಾರ ಸಂಜೆ ಸ್ನೇಹಿತರ ಜೊತೆ ಗ್ರಾಮದ ಕೆರೆಯಲ್ಲಿ ಈಜಲು ತೆರಳಿದ್ದನು. ಈ ವೇಳೆ ಶಶಾಂಕ್ ಕೆರೆಯಲ್ಲಿ ಮುಳುಗಿದ್ದಾನೆ. ಆಗ ಜೊತೆಯಲ್ಲಿದ್ದ ಸ್ನೇಹಿತರ ರಕ್ಷಿಸಲು ಮುಂದಾಗಿದ್ದಾರೆ. ಆದರೆ ಅವರಿಂದ ಸಾಧ್ಯವಾಗಿಲ್ಲ.

ಕೊನೆಗೆ ಸ್ನೇಹಿತರು ಓಡಿ ಹೋಗಿ ಮನೆಯವರಿಗೆ ಮತ್ತು ಊರಿನವರಿಗೆ ತಿಳಿಸಿದ್ದಾರೆ. ತಕ್ಷಣ ಊರಿನವರು ಬಂದು ಆತನಿಗಾಗಿ ಹುಡುಕಾಡಿದ್ದಾರೆ. ಆದರೆ ನಾಯ್ಕ ಪತ್ತೆಯಾಗಿರಲಿಲ್ಲ. ಇಂದು ಬೆಳಗ್ಗೆ ಮೃತದೇಹ ಮೇಲೆ ತೇಲಿಕೊಂಡು ಬಂದಿದೆ. ಬಳಿಕ ಗ್ರಾಮದವರೇ ಹೋಗಿ ಮೃತದೇಹವನ್ನು ಕೆರೆಯಿಂದ ಹೊರ ತೆಗೆದುಕೊಂಡು ಬಂದಿದ್ದಾರೆ.

ಈ ಘಟನೆ ಸಂಬಂಧ ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳದಲ್ಲಿ ಮೃತ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.

Share This Article
Leave a Comment

Leave a Reply

Your email address will not be published. Required fields are marked *