ಇಂದು ರಾಜ್ಯದಲ್ಲಿ 17 ವ್ಯಕ್ತಿಗಳಿಗೆ ಕೊರೊನಾ – 6 ಮಂದಿಗೆ ಜಮಾತ್ ನಂಟು

Public TV
1 Min Read

ಬೆಂಗಳೂರು: ಲಾಕ್‍ಡೌನ್ ನಡುವೆಯೂ ಕರ್ನಾಟಕದಲ್ಲಿ ತಬ್ಲಿಘಿಗಳಿಂದ ಕೊರೊನಾ ವೈರಸ್ ಹೆಚ್ಚಾಗುತ್ತಿದೆ.

ದೆಹಲಿಯ ನಿಜಾಮುದ್ದೀನ್ ಧರ್ಮಸಭೆಗೆ ಹೋಗಿ ಬಂದಿದ್ದ ತಬ್ಲಿಘಿಗಳು ರಾಜ್ಯದ ಬಹುತೇಕ ಜಿಲ್ಲೆಗಳಿಗೆ ಸೋಂಕು ಹಬ್ಬಿಸಿದ್ದರು. 1,300 ಮಂದಿ ಪೈಕಿ ನಿನ್ನೆಯವರೆಗೂ 55 ಮಂದಿಗೆ ಸೋಂಕು ತಗುಲಿತ್ತು. ಆ ಸಂಖ್ಯೆ ಈಗ  ಹೆಚ್ಚಾಗಿದೆ.

ಇಂದು ಬೆಳಕಿಗೆ ಬಂದ 17 ಸೋಂಕಿತರ ಪೈಕಿ 6 ಮಂದಿಗೆ ಜಮಾತ್ ನಂಟಿದೆ. ಕೊರೊನಾಗೆ ಬಲಿಯಾದ ಕಲಬುರಗಿಯ ವೃದ್ಧ(ರೋಗಿ ನಂಬರ್ 177)ನ ಕುಟುಂಬದಲ್ಲಿ ಮತ್ತೆ ಸೋಂಕು ಕಾಣಿಸಿಕೊಂಡಿದೆ.

ಮೃತ ವೃದ್ಧನ ಸೊಸೆಗೆ ಕೊರೊನಾ ಪಾಸಿಟಿವ್ ಬಂದಿದೆ. ಅಲ್ಲದೇ, ಬಹಮನಿ ಆಸ್ಪತ್ರೆಯಲ್ಲಿದ್ದಾಗ ವೃದ್ಧನನ್ನು ನೋಡಿಕೊಂಡಿದ್ದ ಆಯಾಗೂ ಸೋಂಕು ವ್ಯಾಪಿಸಿದೆ. ಬೆಳಗಾವಿಯ ನಾಲ್ವರಿಗೂ ಕೂಡ ಜಮಾತ್ ನಂಟು ಇರುವುದು ಖಚಿತಪಟ್ಟಿದೆ.

ರಾಯಭಾಗದ  ರೋಗಿ ನಂಬರ್ 150ರಿಂದ ಮೂವರಿಗೆ ಸೋಂಕು ಹಬ್ಬಿದೆ. ಕ್ವಾರಂಟೇನ್‍ನಲ್ಲಿ ಇರಬೇಕು ಅಂತಾ ಹೇಳಿದ್ದರೂ ಕೇಳದ ಈ ವ್ಯಕ್ತಿ ಸಿಹಿ ತಿಂಡಿ ಮಾರಲು ಹೋಗಿದ್ದರಿಂದ ಸೋಂಕು ಬಂದಿದೆ ಎಂದು ಹೇಳಲಾಗುತ್ತಿದೆ.

ಇಂದಿನ ಪ್ರಕರಣ
> ರೋಗಿ ನಂ.220 – ಕಲಬುರಗಿಯ 24 ವರ್ಷದ ಮಹಿಳೆ – ಕೇಸ್ ನಂ.177ರ ಸೊಸೆ
> ರೋಗಿ ನಂ.222 – ಕಲಬುರಗಿಯ 38 ವರ್ಷದ ಮಹಿಳೆ – ಕೇಸ್ ನಂ.177ರ ಸಂಪರ್ಕ – ಆಸ್ಪತ್ರೆ ಆಯಾ
> ರೋಗಿ ನಂ.223 – ಬೆಳಗಾವಿಯ ರಾಯಭಾಗದ 19 ವರ್ಷದ ಯುವಕ – ಕೇಸ್ ನಂ.150ರ ಸಂಪರ್ಕ
> ರೋಗಿ ನಂ.224 – ಬೆಳಗಾವಿಯ ಹಿರೇಬಾಗೇವಾಡಿಯ 38 ವರ್ಷದ ಪುರುಷ – ಕೇಸ್ ನಂ.128ರ ಸಂಪರ್ಕ
> ರೋಗಿ ನಂ.225 – ಬೆಳಗಾವಿಯ ರಾಯಭಾಗದ 55 ವರ್ಷದ ಪುರುಷ – ಕೇಸ್ ನಂ.150ರ ಸಂಪರ್ಕ
> ರೋಗಿ ನಂ.226 – ಬೆಳಗಾವಿಯ ರಾಯಭಾಗದ 25 ವರ್ಷದ ಯುವಕ – ಕೇಸ್ ನಂ.150ರ ಸಂಪರ್ಕ

Share This Article
Leave a Comment

Leave a Reply

Your email address will not be published. Required fields are marked *