– ರಾಯಚೂರು, ಯಾದಗಿರಿಯಲ್ಲಿ ಶೂನ್ಯ ಪ್ರಕರಣ
ಬೆಂಗಳೂರು: ಇಂದು ರಾಜ್ಯದಲ್ಲಿ 1,857 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, 29 ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಕೋವಿಡ್-19 ಸೋಂಕಿನ ಖಚಿತ ಪ್ರಮಾಣ ಶೇ.1.21 ಮತ್ತು ಮರಣ ಪ್ರಮಾಣ ಶೇ.1.56ಕ್ಕೆ ಇಳಿಕೆಯಾಗಿದೆ.
ಸದ್ಯ ರಾಜ್ಯದಲ್ಲಿ 23,905 ಸಕ್ರಿಯ ಪ್ರಕರಣಗಳಿದ್ದು, ಇವತ್ತು 2,050 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಇದುವರೆಗೂ 28,93,556 ಕೊರೊನಾ ಪ್ರಕರಣಗಳು ದಾಖಲಾಗಿದ್ದು, 36,352 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ.
ಇಂದು ಒಟ್ಟು 1,53,415 ಸ್ಯಾಂಪಲ್ ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಬೆಂಗಳೂರಿನಲ್ಲಿಂದು 551 ಜನಕ್ಕೆ ಸೋಂಕು ತಗುಲಿದ್ದು, 9 ಮಂದಿ ಸಾವನ್ನಪ್ಪಿದ್ದಾರೆ. ಸದ್ಯ ಬೆಂಗಳೂರು ನಗರದಲ್ಲಿ 8,346 ಸಕ್ರಿಯ ಪ್ರಕರಣಗಳಿವೆ. ಇದನ್ನೂ ಓದಿ: ಸೆಪ್ಟೆಂಬರ್ ವೇಳೆಗೆ ಮಕ್ಕಳಿಗೆ ಕೋವಿಡ್ ಲಸಿಕೆ – ಏಮ್ಸ್ ನಿರ್ದೇಶಕ ರಣದೀಪ್ ಗುಲೇರಿಯಾ
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 1, ಬಳ್ಳಾರಿ 12, ಬೆಳಗಾವಿ 46, ಬೆಂಗಳೂರು ಗ್ರಾಮಾಂತರ 44, ಬೆಂಗಳೂರು ನಗರ 551, ಬೀದರ್ 1, ಚಾಮರಾಜನಗರ 34, ಚಿಕ್ಕಬಳ್ಳಾಪುರ 18, ಚಿಕ್ಕಮಗಳೂರು 57, ಚಿತ್ರದುರ್ಗ 14, ದಕ್ಷಿಣ ಕನ್ನಡ 269, ದಾವಣಗೆರೆ 16, ಧಾರವಾಡ 7, ಗದಗ 3, ಹಾಸನ 111, ಹಾವೇರಿ 6, ಕಲಬುರಗಿ 8, ಕೊಡಗು 79, ಕೋಲಾರ 23, ಕೊಪ್ಪಳ 2, ಮಂಡ್ಯ 37, ಮೈಸೂರು 177, ರಾಯಚೂರು 0, ರಾಮನಗರ 1, ಶಿವಮೊಗ್ಗ 51, ತುಮಕೂರು 99, ಉಡುಪಿ 129, ಉತ್ತರ ಕನ್ನಡ 59, ವಿಜಯಪುರ 2 ಮತ್ತು ಯಾದಗಿರಿಯಲ್ಲಿ 0 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.