ಸಮುದ್ರದಲ್ಲಿ ಆಟವಾಡಲು ಹೋಗಿ ಇಬ್ಬರು ಬಾಲಕರು ನೀರುಪಾಲು

Public TV
0 Min Read

ಕಾರವಾರ: ಆಟವಾಡಲು ಸಮುದ್ರಕ್ಕೆ ತೆರಳಿದ್ದ ಬಾಲಕರು ಶವವಾಗಿ ಪತ್ತೆಯಾಗಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರ್ಡೇಶ್ವರದ ಸಣ್ಣಬಾವಿ ಗ್ರಾಮದಲ್ಲಿ ತಡರಾತ್ರಿ ನಡೆದಿದೆ.

ಗಣೇಶ ನಾಯ್ಕ(10) ಮತ್ತು ವಿನಾಯಕ ನಾಯ್ಕ(09) ಮೃತ ದುರ್ದೈವಿಗಳು. ಸೋಮವಾರ ಸಮುದ್ರದಲ್ಲಿ ಆಟವಾಡುತ್ತಿದ್ದ ವೇಳೆ ಅಲೆಗಳಿಗೆ ಸಿಕ್ಕು ಕೊಚ್ಚಿ ಹೋಗಿದ್ದರು. ತಡರಾತ್ರಿ ಹುಡುಕಾಟ ನಡೆಸಿದರೂ ಇಬ್ಬರ ಸುಳಿವು ಸಿಕ್ಕಿರಲಿಲ್ಲ.

ಇಂದು ಬೆಳಿಗ್ಗೆ ಗ್ರಾಮದ ಕಡಲತೀರದಲ್ಲಿ ಬಾಲಕರ ಶವ ಪತ್ತೆಯಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುರ್ಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

Share This Article
Leave a Comment

Leave a Reply

Your email address will not be published. Required fields are marked *