ಭುವನೇಶ್ವರ (ಗಂಜಾಂ): ಮದುವೆ ಸಮಾರಂಭದಲ್ಲಿ (Wedding) ಪಾಲ್ಗೊಂಡಿದ್ದ 14 ಮತ್ತು 15 ವರ್ಷ ಇಬ್ಬರು ಹುಡುಗಿಯರನ್ನು ಅಪಹರಿಸಿ ನಾಲ್ವರು ಕಾಮುಕರು ಅತ್ಯಾಚಾರ ಎಸಗಿರುವ ಘಟನೆ ಒಡಿಶಾದ (Odisha) ಗಂಜಾಂನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಎಲ್ಲಾ ಆರೋಪಿಗಳೂ ವಿಶಾಖಪಟ್ಟಣಂಗೆ (Visakhapatnam) ಎಸ್ಕೇಪ್ ಆಗಲು ಯತ್ನಿಸುತ್ತಿದ್ದಾಗ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಹನಿಮೂನ್ಗೆ ತೆರಳಿದ್ದ ದಂಪತಿ ನಾಪತ್ತೆ ಕೇಸ್ – ಮೂವರು ಪುರುಷರೊಟ್ಟಿಗೆ ದಂಪತಿ ನೋಡಿದ್ದೆ: ಸ್ಫೋಟಕ ಸಂಗತಿ ಬಿಚ್ಚಿಟ್ಟ ಗೈಡ್
ಬ್ರಹ್ಮಪುರ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಶ್ರವಣ್ ವಿವೇಕ್ ಅವರು ಹೇಳುವಂತೆ, ಘಟನೆ ಜೂನ್ 3ರಂದು ನಡೆದಿದೆ. ಇಬ್ಬರು ಹೆಣ್ಣುಮಕ್ಕಳು ಮದುವೆ ಸಮಾರಂಭವೊಂದರಲ್ಲಿ ಭಾಗವಹಿಸಿದ್ದರು. ಈ ವೇಳೆ ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ನಿರ್ಜನ ಪ್ರದೇಶಕ್ಕೆ ಇಬ್ಬರನ್ನು ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ, ಜೊತೆಗೆ ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ಕುಟುಂಬಸ್ಥರು ದೂರಿನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಐತಿಹಾಸಿಕ ಕ್ಷಣಕ್ಕೆ ಭಾರತ ಸಜ್ಜು – ಜೂ.10ರಂದು ಭಾರತದ ಶುಭಾಂಶು ಶುಕ್ಲಾ ಬಾಹ್ಯಾಕಾಶ ಯಾನ ಶುರು
ಪ್ರಾಥಮಿಕ ತನಿಖೆಯಲ್ಲಿ ಹುಡುಗಿಯರಿಗೆ ಮೊದಲು ಇಬ್ಬರು ಪುರುಷರು ಆಮಿಷವೊಡ್ಡಿದ್ದಾರೆ, ಈ ಪೈಕಿ ಒಬ್ಬ ಆರೋಪಿ ಸಂತ್ರಸ್ತೆಗೆ ಪರಿಚಯವಿದ್ದ. ಅವರೊಂದಿಗೆ ಇನ್ನಿಬ್ಬರು ಸೇರಿಕೊಂಡು ಅಪಹರಿಸಿದ ಬಳಿಕ ಕೃತ್ಯ ಎಸಗಿದ್ದಾರೆ ಅನ್ನೋದು ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: 70 ವರ್ಷ ಲಿವ್ ಇನ್ ರಿಲೇಶನ್ – 95ನೇ ವಯಸ್ಸಿನಲ್ಲಿ ಹಸೆಮಣೆ ಏರಿದ ರಾಜಸ್ಥಾನ ಜೋಡಿ
ಬಳಿಕ ವಿಷಯ ತಿಳಿದ ಪೋಷಕರು ಜೂನ್ 4 ರಂದು ದೂರು ದಾಖಲಿಸಿದ್ರು, ಅದರನ್ವಯ ಪ್ರಕರಣ ದಾಖಲಿಸಿಕೊಂಡು ನಾಲ್ವರನ್ನು ಬಂಧಿಸಲಾಯಿತು. ಜೂನ್ 6 ರಂದು ಬಾಲಕಿಯರನ್ನ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು. ನಂತರ ಬಾಲಕಿಯನ್ನು ಕೌನ್ಸೆಲಿಂಗ್ಗಾಗಿ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಲಾಗಿದೆ ಎಂದು ತಿಳಿದುಬಂದಿದೆ.