ರಾಯಚೂರು: ಬೈಕ್‍ಗೆ ವಾಹನ ಡಿಕ್ಕಿ- ಸವಾರರಿಬ್ಬರು ಸಾವು

Public TV
1 Min Read

ರಾಯಚೂರು: ಅಪರಿಚಿತ ವಾಹನವೊಂದು ಬೈಕ್‍ಗೆ ಡಿಕ್ಕಿ ಹೊಡೆದು ಸವಾರರಿಬ್ಬರು ಸ್ಥಳದಲ್ಲೆ ಮೃತಪಟ್ಟಿರೋ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ಬಾದರ್ಲಿ ಬಳಿ ನಡೆದಿದೆ.

ಭಾನುವಾರ ತಡರಾತ್ರಿ ಘಟನೆ ನಡೆದಿದ್ದು, ಬೆಳಗ್ಗಿನ ಜಾವ ಬೆಳಕಿಗೆ ಬಂದಿದೆ. ಹುಬ್ಬಳ್ಳಿ ಕಡೆಯಿಂದ ಸಿಂಧನೂರಿಗೆ ಬರುತ್ತಿದ್ದ ವೇಳೆ ಬೈಕ್ ಸವಾರರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಅಪಘಾತದ ಬಳಿಕ ವಾಹನದ ಸಮೇತ ಚಾಲಕ ಪರಾರಿಯಾಗಿದ್ದಾನೆ. ಮೃತರು ಹುಬ್ಬಳ್ಳಿ ಮೂಲದವರು ಎನ್ನಲಾಗಿದ್ದು, ಅವರ ಗುರುತು ಪತ್ತೆಯಾಗಿಲ್ಲ.

ಘಟನೆ ಕುರಿತು ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರ ಗುರುತು ಹಾಗೂ ಡಿಕ್ಕಿ ಹೊಡೆದ ಅಪರಿಚಿತ ವಾಹನ ಪತ್ತೆ ಹಚ್ಚಲು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *