ಶಿವಮೊಗ್ಗದಿಂದ ಬೆಂಗ್ಳೂರಿಗೆ ಝೀರೋ ಟ್ರಾಫಿಕ್‍ನಲ್ಲಿ ಎರಡೂವರೆ ತಿಂಗಳ ಮಗು ರವಾನೆ

Public TV
1 Min Read

ಶಿವಮೊಗ್ಗ: ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಎರಡೂವರೆ ತಿಂಗಳ ಹೆಣ್ಣು ಮಗುವೊಂದನ್ನು ಶಿವಮೊಗ್ಗದಿಂದ ಬೆಂಗಳೂರಿಗೆ ಇಂದು ಸಂಜೆ ಝೀರೋ ಟ್ರಾಫಿಕ್ ಮೂಲಕ ಕಳುಹಿಸಲಾಗಿದೆ.

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಜಯಪುರ ನಿವಾಸಿಯಾಗಿರುವ ಇಸ್ಮಾಯಿಲ್ ಹಾಗೂ ತಶ್ರತ್ ದಂಪತಿಯ ಎರಡನೇ ಮಗು ಹುಟ್ಟಿನಿಂದಲೇ ಹೃದಯ ಸಮಸ್ಯೆಯಿಂದ ಬಳಲುತಿತ್ತು. ಈ ಕಂದಮ್ಮನಿಗೆ ಈಗಾಗಲೇ ಮೂರು ಬಾರಿ ಶಸ್ತ್ರ ಚಿಕಿತ್ಸೆ ಸಹ ನಡೆಸಲಾಗಿದೆ. ಅಲ್ಲದೇ ಕಳೆದೊಂದು ವಾರದ ಹಿಂದೆ ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆದಿದ್ದ ಮಗುವನ್ನು ಡಿಸ್ಚಾರ್ಜ್ ಮಾಡಲಾಗಿತ್ತು.

ಮಗುವಿಗೆ ಇಂದು ಮತ್ತೆ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಮಗುವಿನ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದ್ದರಿಂದ ಈ ಹಿಂದೆ ಚಿಕಿತ್ಸೆ ನೀಡಿದ್ದ ವೈದ್ಯರಿಂದಲೇ ಚಿಕಿತ್ಸೆ ಅಗತ್ಯ ಇರುವ ಕಾರಣ ಮತ್ತೆ ಅಗತ್ಯ ಸೌಲಭ್ಯದೊಂದಿಗೆ ಶಿವಮೊಗ್ಗದಿಂದ ಚನ್ನಗಿರಿ, ಚಿತ್ರದುರ್ಗ, ತುಮಕೂರು ಮಾರ್ಗವಾಗಿ ಬೆಂಗಳೂರಿಗೆ ಅಂಬ್ಯುಲೆನ್ಸ್ ನಲ್ಲಿ ಝೀರೋ ಟ್ರಾಫಿಕ್ ಮೂಲಕ ಕಳುಹಿಸಲಾಯಿತು.

Share This Article
Leave a Comment

Leave a Reply

Your email address will not be published. Required fields are marked *