ನೀರಿನ ಸಂಪ್‍ಗೆ ಬಿದ್ದು ಮಗು ಸಾವು

Public TV
1 Min Read

ಬೆಂಗಳೂರು: ಮಗುವೊಂದು ಆಟವಾಡುತ್ತಾ ಆಯತಪ್ಪಿ ನೀರಿನ ಸಂಪ್ ಗೆ ಬಿದ್ದು ಮೃತಪಟ್ಟ ಘಟನೆ ನಾಗವಾರದ ಮಂಜುನಾಥ ಲೇಔಟ್‍ನಲ್ಲಿ ನಡೆದಿದೆ.

ಎರಡೂವರೆ ವರ್ಷದ ಅರ್ಹಾನ್ ಮೃತಪಟ್ಟ ಮಗು. ಇಂದು ಮನೆಯ ಹತ್ತಿರ ಆಟವಾಡುತ್ತಿದ್ದಾಗ ಆಯತಪ್ಪಿ ನೀರಿನ ಸಂಪ್ ಗೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದೆ. ಮಗುವಿನ ಸಾವಿನಿಂದ ಪೋಷಕರು ಆಕ್ರಂದನ ಮುಗಿಲು ಮುಟ್ಟಿದೆ.

ನೀರಿನ ಸಂಪ್ ಮಾಲೀಕರ ನಿರ್ಲಕ್ಷದಿಂದಾಗಿ ಮಗು ಮೃತಪಟ್ಟಿದ್ದು. ಕಳೆದ ಮೂರು ವರ್ಷಗಳ ಹಿಂದೆ ಅರೆಬರೆ ಕಾಮಗಾರಿ ನಡೆಸಿ, ಸಂಪ್ ಅನ್ನು ಮುಚ್ಚದೇ ಕೈ ಬಿಟ್ಟಿದ್ದಾರೆ. ಅಲ್ಲದೇ ಸಂಪ್ ಅನ್ನು ಸಂಪೂರ್ಣವಾಗಿ ತೆರೆದು ಬಿಟ್ಟಿದ್ದರು. ಈ ಹಿಂದೆಯೂ ಸಂಪ್ ನಿಂದಾಗಿ ಹಲವು ಅವಘಡಗಳು ಸಂಭವಿಸಿದ್ದವು.

ಈ ಕುರಿತು ಸ್ಥಳೀಯರು ಮನೆ ಮಾಲೀಕರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿರಲ್ಲಿಲ್ಲ. ಮಾಲೀಕನ ನಿರ್ಲಕ್ಷ್ಯದಿಂದಲೇ ಈ ಅವಘಡ ಸಂಭವಿಸಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆ ಸಂಬಂಧ ಸ್ಥಳಕ್ಕೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ಸಂಬಂಧ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *