2 ವರ್ಷದ ಹೆಣ್ಣು ಮಗು ಅನುಮಾನಾಸ್ಪದ ಸಾವು – ತಾತನ ವಿರುದ್ಧವೇ ಕೊಲೆಯ ಶಂಕೆ

By
1 Min Read

ಚಿಕ್ಕಬಳ್ಳಾಪುರ: ಮನೆಯ ಪಕ್ಕದ ನೀರಿನ ಸಿಮೆಂಟ್ ತೊಟ್ಟಿಯಲ್ಲಿ ಮಗುವಿನ (Child) ಮೃತದೇಹ ಪತ್ತೆಯಾಗಿದೆ. ಅನುಮಾಮಾಸ್ಪದವಾಗಿ ಮಗು ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ರೇಚನಾಯ್ಕಪಲ್ಲಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ರಾಜಶೇಖರ ರೆಡ್ಡಿ ಹಾಗೂ ಕನ್ಯಾಕುಮಾರಿ ದಂಪತಿಯ 2 ವರ್ಷದ ಮಗು ಲಲಿತ ರೆಡ್ಡಿ ಮೃತ ದುರ್ದೈವಿ. ಮಗುವಿನ ತಾಯಿ ಕನ್ಯಾಕುಮಾರಿ ಹಾಗೂ ಅವರ ಅತ್ತೆ-ಮಾವನ ನಡುವೆ ಕೌಟುಂಬಿಕ ಕಲಹವಿದ್ದು, ಪೊಲೀಸ್ ಠಾಣೆಯಲ್ಲಿ ದೂರು ಸಹ ಕೊಡಲಾಗಿತ್ತು. ಹಲವು ಬಾರಿ ಆದರೂ ಅತ್ತೆ, ಸೊಸೆ, ಮಾವನ ನಡುವೆ ಅಷ್ಟಕ್ಕಷ್ಟೇ ಮಾತು ಇತ್ತು ಎನ್ನಲಾಗಿದೆ.

ಹೀಗಿದ್ದಾಗ ತಾಯಿ ಮಗುವನ್ನು ಮನೆಯಲ್ಲಿ ಅತ್ತೆ-ಮಾವನ ಜೊತೆ ಬಿಟ್ಟು ಜಮೀನಿನ ಬಳಿ ತೆರಳಿದ್ದಾಗ ಮನೆಯಲ್ಲಿದ್ದ ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿದೆ. ನೀರಿನ ತೊಟ್ಟಿಯಲ್ಲಿ ಮಗುವಿನ ಮೃತದೇಹ ಪತ್ತೆಯಾಗಿದೆ. ಇದನ್ನೂ ಓದಿ: ಶಾಲಾ ಆವರಣದಲ್ಲಿ ವಾಮಾಚಾರ- ತಲೆ ಬುರುಡೆ, ನಿಂಬೆ ಹಣ್ಣು, ಕುಂಕುಮ ಪತ್ತೆ

ಮಧ್ಯಾಹ್ನ ಜಮೀನಿನ ಬಳಿ ಇದ್ದ ಮಗುವನ್ನು ತಾತ ಸೋಮಶೇಖರ್ ರೆಡ್ಡಿ ಲಾಲಿಪಾಪ್ ಕೊಡಿಸೋದಾಗಿ ಹೇಳಿ ಕರೆದುಕೊಂಡು ಹೋಗಿದ್ದ. ಇಷ್ಟು ದಿನ ಮಗುವನ್ನು ಮಾತನಾಡಿಸದ ತಾತ 3 ದಿನಗಳಿಂದ ಮಗುವಿಗೆ ಚಾಕ್ಲೇಟ್ ಕೊಡಿಸಿ ಬಹಳ ಪ್ರೀತಿಯಿಂದ ಮಾತನಾಡುತ್ತಿದ್ದ ಎನ್ನಲಾಗಿದೆ. ಹೀಗಾಗಿ ತಾತನೇ ಉದ್ದೇಶಪೂರ್ವಕವಾಗಿ ಕೊಲೆ ಮಾಡಿರುವ ಸಂಶಯ ಪೋಷಕರದ್ದಾಗಿದೆ. ಈ ಬಗ್ಗೆ ಪಾತಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಭುಗಿಲೆದ್ದ ಆಕ್ರೋಶದ ನಡುವೆಯೂ ತಮಿಳುನಾಡಿಗೆ ನೀರು; KRS ನೀರಿನ ಮಟ್ಟ 96 ಅಡಿಗೆ ಕುಸಿತ

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್