ಶ್ರೀಗಂಧ ಬೆಳೆದ ರೈತನಿಗೆ ಸಂಕಷ್ಟ – 4,000 ಮರದಲ್ಲಿ ಅರ್ಧ ಭಾಗ ಕಳ್ಳರ ಪಾಲು!

By
1 Min Read

ರಾಮನಗರ: ಮಾಗಡಿಯ (Magadi) ರೈತರೊಬ್ಬರು (Farmer) ಬೆಳೆದಿದ್ದ 4,000 ಗಂಧದ ಮರಗಳಲ್ಲಿ (Sandalwood) ಸುಮಾರು 2000 ಮರಗಳು ಕಳ್ಳರ ಪಾಲಾಗಿವೆ.

- Advertisement -

ಮಾಗಡಿ ತಾಲೂಕಿನ ಅತ್ತಿಂಗೆರೆ ಗ್ರಾಮದ ಸೋಮಕ್ಕನಮಠದ ಬಳಿಯ 12 ಎಕರೆ ಜಮೀನಿನಲ್ಲಿ ಪಂಚಲಿಂಗಯ್ಯ ಹಾಗೂ ಸಹೋದರ ಮಹಾಲಿಂಗಯ್ಯ ಎಂಬವರು ಮೈಸೂರು ಸ್ಯಾಂಡಲ್ ಕಂಪನಿಯೊಂದಿಗೆ ಒಪ್ಪಂದ ಮಾಡಿಕೊಂಡು ಕಳೆದ 10 ವರ್ಷದಿಂದ ಶ್ರೀಗಂಧ ಬೆಳೆದಿದ್ದರು. ಸುಮಾರು 4 ಸಾವಿರಕ್ಕೂ ಅಧಿಕ ಶ್ರೀಗಂಧದ ಮರಗಳನ್ನು ಬೆಳೆಸಲಾಗಿತ್ತು.

- Advertisement -

- Advertisement -

ಇತ್ತೀಚಿಗೆ ಕಳ್ಳರು ರಾತ್ರಿ ವೇಳೆ ತೋಟಕ್ಕೆ ನುಗ್ಗಿ ಶ್ರೀಗಂಧದ ಮರಗಳನ್ನ ಕಡಿದು ಹೊತ್ತೊಯ್ದಿದ್ದಾರೆ. ಸುಮಾರು 2 ಸಾವಿರ ಶ್ರೀಗಂಧದ ಮರಗಳನ್ನ ಕಳ್ಳತನ ಮಾಡಲಾಗಿದೆ. ಇದರಿಂದ ಕೋಟ್ಯಂತರ ರೂ. ನಷ್ಟ ಅನುಭವಿಸಿ ಸಂಕಷ್ಟಕ್ಕೆ ಸಿಲುಕಿದ ರೈತ, ಪೊಲೀಸರ ಮೊರೆ ಹೋಗಿದ್ದಾರೆ.

- Advertisement -

ಈ ಸಂಬಂಧ ಮಾಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಕಳ್ಳರ ಹಾವಳಿ ತಪ್ಪಿಸುವಂತೆ ಮನವಿ ಮಾಡಲಾಗಿದೆ.

Share This Article