ಬಜೆಟ್‍ನಲ್ಲಿ ಅಬಕಾರಿ ಇಲಾಖೆಗೆ ಹೊಸ ರೂಪ – ಪೂರ್ವಭಾವಿ ಸಭೆಯಲ್ಲಿ ಸಿಎಂ ಸ್ಪಷ್ಟನೆ

By
1 Min Read

ಬೆಂಗಳೂರು: 2022-23 ನೇ ಸಾಲಿನ ರಾಜ್ಯ ಬಜೆಟ್‍ನಲ್ಲಿ ಅಬಕಾರಿ ಇಲಾಖೆಗೆ ಹೊಸ ಸ್ವರೂಪ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

2022-23ನೇ ಸಾಲಿನ ರಾಜ್ಯ ಬಜೆಟ್ ಕುರಿತು ವಿಧಾನಸೌಧದಲ್ಲಿಂದು ನಡೆದ ಇಲಾಖಾವಾರು ಆಯವ್ಯಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಬಕಾರಿ ಉದ್ಯಮ ವ್ಯಾಪ್ತಿ ಹೆಚ್ಚಿಸಿಕೊಂಡಿದೆ. ಯಾವುದೇ ಉದ್ಯಮ ವ್ಯಾಪ್ತಿ ಹೆಚ್ಚಿಸಿಕೊಂಡಾಗ ಬದಲಾವಣೆ ಆಗಲು ಸಮಯ ಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಕಾಲ ಕಾಲಕ್ಕೆ ವಿಚಾರಣೆ ಮಾಡಿ ಸರಿಪಡಿಸುವುದು ಎಲ್ಲರ ಕೆಲಸ ಎಂದರು. ಇದನ್ನೂ ಓದಿ: ಅಗ್ನಿ ಅವಘಡ – ಕಟ್ಟಡದಿಂದ ಹಾರಿ ಜೀವ ಉಳಿಸಿಕೊಂಡ ತಾಯಿ, ಮಗಳು

ಇಲಾಖೆ ಬಗ್ಗೆ ಸಹಾನೂಭೂತಿ ಇದೆ. ಹಾಗೆಯೇ ಇಲಾಖೆಯಲ್ಲಿ ನಡೆಯುತ್ತಿರುವ ಕಿರುಕುಳ ತಪ್ಪಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ವ್ಯವಸ್ಥೆಯಲ್ಲಿ ಬದಲಾವಣೆ ತರಲು ಬಜೆಟ್‍ನಲ್ಲಿ ಇಲಾಖೆಗೆ ಹೊಸ ಸ್ವರೂಪ ನೀಡಲಾಗುವುದು. ಆರ್ಥಿಕ ಮಿತಿಗಳನ್ನು ನೋಡಿಕೊಂಡು ನೌಕರರಿಗೆ ಸೌಲಭ್ಯ ನೀಡಲು ಕ್ರಮ ಕೈಗೊಳ್ಳಲಾಗುವುದಲ್ಲದೇ ಕಾನೂನುಗಳನ್ನು ಬದಲಾಯಿಸುವ ಸಂಬಂಧ ಗಮನಹರಿಸಲಾಗುವುದು ಎಂದು ಹೇಳಿದರು.

ರಾಜ್ಯದಲ್ಲಿ ನಕಲಿ ಮದ್ಯ ತಯಾರಿಕೆ ಮತ್ತು ಹೊರ ರಾಜ್ಯದಲ್ಲಿ ಆಗಮಿಸುವ ನಕಲಿ ಮದ್ಯ ತಡೆಗೆ ಸರ್ಕಾರ ಉಗ್ರ ಕ್ರಮ ಕೈಗೊಂಡಿದೆ. ಇದರಿಂದ ಸರ್ಕಾರಕ್ಕೆ ಆದಾಯ ಕೂಡ ಬರುತ್ತದೆ. ನಕಲಿ ಜಾಲದ ಹಿಂದೆ ಯಾರೇ ಇದ್ದರೂ ಅವರನ್ನು ಮುಲಾಜಿಲ್ಲದೇ ಅಮಾನತು ಮಾಡುವಂತೆ ಇಲಾಖಾ ಆಯುಕ್ತರಿಗೆ ಇದೇ ಸಂದರ್ಭದಲ್ಲಿ ಸಿಎಂ ಸೂಚಿಸಿದರು. ಇದನ್ನೂ ಓದಿ: ಹರ್ಷ ಹತ್ಯೆ ಹಿಂದೆ ಎಸ್ ಡಿಪಿಐ, ಸಿಎಫ್‍ಐಗಳ ಕೈವಾಡವಿದೆ: ಮಾಜಿ ಎಂಎಲ್‍ಸಿ ಗಣೇಶ್ ಕಾರ್ಣಿಕ್

ಸಿಎಲ್ 7, ಸಿಎಲ್ 9 ವಿಚಾರದಲ್ಲಿ ಸಾಕಷ್ಟು ದೂರುಗಳು ಬಂದಿವೆ. ಇದೆಲ್ಲವನ್ನೂ ಸರಿಪಡಿಸುವ ಕೆಲಸ ಆಗಬೇಕು. ವ್ಯಾಪಾರ, ಆದಾಯ ಮೂರು ಮುಖ್ಯ ಅಂಶಗಳನ್ನು ಇಟ್ಟುಕೊಂಡು ಕೆಲಸ ಮಾಡುವಂತೆ ಸೂಚಿಸಿದರಲ್ಲದೇ ಸಮಯ ನೀಡಿದರೆ ಇಲಾಖೆಯಲ್ಲಿ ಆ ಮೂಲಾಗ್ರ ಬದಲಾವಣೆ ತರುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.

Share This Article
Leave a Comment

Leave a Reply

Your email address will not be published. Required fields are marked *