ಬೆಂಗಳೂರು: ರಾಜ್ಯದಲ್ಲಿ ಕೆಲದಿನಗಳಿಂದ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಕಾಣುತ್ತಿದೆ. ಇಂದು ಒಟ್ಟು 213 ಹೊಸ ಕೊರೊನಾ ಪ್ರಕರಣ ದಾಖಲಾಗಿದ್ದು, 5 ಮರಣ ಪ್ರಕರಣ ದಾಖಲಾಗಿದೆ. ಬೆಂಗಳೂರು ಮತ್ತು ಕೋಲಾರದಲ್ಲಿ ತಲಾ 2 ಮತ್ತು ರಾಮನಗರದಲ್ಲಿ 1 ಸಾವು ಸಂಭವಿಸಿದೆ.
ಬೆಂಗಳೂರು ನಗರದಲ್ಲಿ 134 ಮಂದಿಗೆ ಪಾಸಿಟಿವ್ ವರದಿಯಾಗಿದ್ದು, 245 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ರಾಜ್ಯದಲ್ಲಿ 370 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 7,096 ಸಕ್ರಿಯ ಪ್ರಕರಣಗಳು ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 29,93,352 ಮಂದಿಗೆ ಕೊರೊನಾ ಬಂದಿದೆ. 29,48,053 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.0.2.34 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.26 ರಷ್ಟಿದೆ. ಇದನ್ನೂ ಓದಿ: ವಿದರ್ಭ ವಿರುದ್ಧ ಕರ್ನಾಟಕಕ್ಕೆ ರೋಚಕ ಜಯ – ಫೈನಲ್ಗೆ ಲಗ್ಗೆ
ಇಂದು ರಾಜ್ಯದಲ್ಲಿ ಒಟ್ಟು 2,36,784 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 80,090 ಸ್ಯಾಂಪಲ್ (ಆರ್ಟಿ ಪಿಸಿಆರ್ 65,433 + 14,657 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಎರಡು ಲಸಿಕೆ ಪಡೆದಿದ್ದರೂ ಕೊರೊನಾಗೆ ವೈದ್ಯೆ ಬಲಿ
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 0, ಬೆಳಗಾವಿ 4, ಬೆಂಗಳೂರು ಗ್ರಾಮಾಂತರ 0, ಬೆಂಗಳೂರು ನಗರ 134, ಬೀದರ್ 1, ಚಾಮರಾಜನಗರ 2, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 3, ಚಿತ್ರದುರ್ಗ 2, ದಕ್ಷಿಣ ಕನ್ನಡ 12, ದಾವಣಗೆರೆ 0, ಧಾರವಾಡ 2, ಗದಗ 0, ಹಾಸನ 8, ಹಾವೇರಿ 0, ಕಲಬುರಗಿ 1, ಕೊಡಗು 3, ಕೋಲಾರ 0, ಕೊಪ್ಪಳ 1, ಮಂಡ್ಯ 4, ಮೈಸೂರು 17, ರಾಯಚೂರು 1, ರಾಮನಗರ 1, ಶಿವಮೊಗ್ಗ 1, ತುಮಕೂರು 9, ಉಡುಪಿ 5, ಉತ್ತರ ಕನ್ನಡ 1, ವಿಜಯಪುರ ಮತ್ತು ಯಾದಗಿರಿಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.