ತುಮಕೂರು: ಹೃದಯಾಘಾತಕ್ಕೆ (Heart Attack) 23 ವರ್ಷದ ಯುವಕ ಸಾವನ್ನಪ್ಪಿದ ಘಟನೆ ಗುಬ್ಬಿ (Gubbi) ತಾಲೂಕಿನ ಅರೇಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಸಿದ್ದೇಶ್ (23) ಮೃತ ದುರ್ದೈವಿ. ಚಿಕ್ಕನಾಯಕನಹಳ್ಳಿಯಲ್ಲಿ ಸ್ನೇಹಿತನ ಮನೆಗೆ ಹೋಗಿ ಊಟಕ್ಕೆ ಹೋಗಿ ವಾಪಸ್ ಬರುವಾಗ ದಾರಿ ಮಧ್ಯದಲ್ಲೇ ಕುಸಿದು ಬಿದ್ದಿದ್ದಾನೆ. ತಕ್ಷಣ ಅವರನ್ನು ಗುಬ್ಬಿ ಆಸ್ಪತ್ರೆಗೆ ಸ್ನೇಹಿತರು ಕರೆತಂದಿದ್ದಾರೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ. ಇದನ್ನೂ ಓದಿ: Heart Attack | ಮೈಸೂರು, ಕೊಡಗಿನಲ್ಲಿ ಹೃದಯಾಘಾತಕ್ಕೆ ಮತ್ತೆರಡು ಬಲಿ
ಹಠಾತ್ ಹೃದಯಾಘಾತದಿಂದ, ಆಸ್ಪತ್ರೆಗೆ ತರುವ ವೇಳೆ ಆತ ಸಾವನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: Heart Attack | ಹಾಸನ, ಶಿವಮೊಗ್ಗದಲ್ಲಿ ತಲಾ ಒಬ್ಬರು ರೈತರು ಹೃದಯಾಘಾತಕ್ಕೆ ಬಲಿ