24 ಬಿಜೆಪಿ ಶಾಸಕರಿಗೆ ಒನ್ ಇಯರ್ ಗಿಫ್ಟ್ ನೀಡಿದ ಸಿಎಂ

Public TV
2 Min Read

ಬೆಂಗಳೂರು: ಸರ್ಕಾರದ ಮೊದಲ ವರ್ಷದ ಸಂಭ್ರಮದ ಸಮಯದಲ್ಲಿ ಸಿಎಂ ಯಡಿಯೂರಪ್ಪ ಬಿಜೆಪಿ ಶಾಸಕರಿಗೆ ಗಿಫ್ಟ್‌ ನೀಡಿದ್ದಾರೆ. 24 ಮಂದಿ ಶಾಸಕರಿಗೆ ವಿವಿಧ ನಿಗಮ, ಮಂಡಳಿಗಳ ಅಧ್ಯಕ್ಷ ಸ್ಥಾನವನ್ನು ನೀಡಿದ್ದಾರೆ.

ಈ ಹಿಂದೆ ಸಚಿವ ಸ್ಥಾನ‌ ಆಂಕಾಕ್ಷಿಗಳಾಗಿದ್ದವರಿಗೂ ಸಿಎಂ‌ ಮಣೆ ಹಾಕಿದ್ದಾರೆ. ಅರಗ ಜ್ಞಾನೇಂದ್ರ, ರಾಜುಗೌಡ, ದತ್ತಾತ್ರೇಯ ಪಾಟೀಲ್ ರೇವೂರ್, ತಿಪ್ಪಾರೆಡ್ಡಿಗೆ ನಿಗಮ ಮಂಡಳಿ ಸ್ಥಾನ ನೀಡಿದ್ದಾರೆ.

ಅತೃಪ್ತರ ಸಭೆಯಲ್ಲಿ ಭಾಗವಹಿಸಿದ್ದವರಿಗೂ ಶಾಸಕರಿಗೂ ಯಡಿಯೂರಪ್ಪ ಮಣೆ ಹಾಕಿದ್ದಾರೆ. ಪರಣ್ಣ ಮುನವಳ್ಳಿ, ಶಿವರಾಜ್ ಪಾಟೀಲ್ , ರಾಜಕುಮಾರ್ ತೇಲ್ಕೋರ್ ಸೇರಿದಂತೆ ಹಲವರಿಗೆ ಅಧ್ಯಕ್ಷ ಸ್ಥಾನವನ್ನು ಕಲ್ಪಿಸಿದ್ದಾರೆ. ಇದನ್ನೂ ಓದಿ: ನಮ್ಮ ಸಾಧನೆ ಬಗ್ಗೆ ಪ್ರಧಾನಿ ಸಂಸದರಿಂದ ಚಪ್ಪಾಳೆ ಹೊಡೆಸಿದ್ರು – ಸಿಎಂ

ಯಾರಿಗೆ ಯಾವ ಹುದ್ದೆ?
1 . ಅರಗ ಜ್ಞಾನೇಂದ್ರ(ತೀರ್ಥಹಳ್ಳಿ) ಕರ್ನಾಟಕ ಗೃಹಮಂಡಳಿ
2. ಎಂ. ಚಂದ್ರಪ್ಪ (ಹೊಳಲ್ಕೆರೆ) ರಾಜ್ಯ ರಸ್ತೆ ಸಾರಿಗೆ ಸಂಸ್ಥೆ
3. ರಾಜುಗೌಡ(ಸುರಪುರ) ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ
4. ಎಂ ಪಿ ಕುಮಾರಸ್ವಾಮಿ(ಮೂಡಿಗೆರೆ) ಕರ್ನಾಟಕ ಮಾರುಕಟ್ಟೆ ಕನ್ಸಲ್ಟೆಂಟ್ ಮತ್ತು ಏಜೆನ್ಸಿಸ್ ಲಿಮಿಟೆಡ್
5. ಎಎಸ್ ಪಾಟೀಲ್ ನಡಹಳ್ಳಿ (ಮುದ್ದೆ ಬಿಹಾಳ) ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ
6. ಎಚ್.ಹಾಲಪ್ಪ(ಸಾಗರ) ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್

7. ಮಾಡಾಳ್ ವಿರೂಪಾಕ್ಷಪ್ಪ(ಚನ್ನಗಿರಿ) ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮ
8. ತಿಪ್ಪಾರೆಡ್ಡಿ (ಚಿತ್ರದುರ್ಗ) ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ
9. ಶಿವನಗೌಡ ನಾಯಕ್ (ದೇವದುರ್ಗ) ರಸ್ತೆ ಅಭಿವೃದ್ಧಿ ನಿಗಮ ನಿಯಮಿತ
10.ಕಳಕಪ್ಪ ಬಂಡಿ(ರೋಣ) ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ
11. ಪರಣ್ಣ ಮುನವಳ್ಳಿ (ಗಂಗಾವತಿ) ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ
12. ಸಿದ್ದು ಸವದಿ(ತೇರದಾಳ) ಕರ್ನಾಟಕ ಕೈಮಗ್ಗ, ಅಭಿವೃದ್ಧಿ ನಿಗಮ ನಿಯಮಿತ

13. ಪ್ರೀತಮ್ ಜಿ ಗೌಡ(ಹಾಸನ) ಅರಣ್ಯ, ವಸತಿ ಮತ್ತು ವಿಹಾರಧಾಮಗಳ ಸಂಸ್ಥೆ
14. ರಾಜ್‍ಕುಮಾರ್ ಪಾಟೀಲ್ ತೇಲ್ಕೂರ್ (ಸೇಡಂ) ಈಶಾನ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ, ಕಲಬುರಗಿ
15. ದತ್ತಾತ್ರೇಯ ಪಾಟೀಲ್ ರೇವೂರ(ಗುಲ್ಬರ್ಗ ದಕ್ಷಿಣ) ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ, ಕಲಬುರಗಿ
16. ಶಂಕರ್ ಪಾಟೀಲ್ ಮುನೇನಕೊಪ್ಪ(ನವಲಗುಂದ) ಕರ್ನಾಟಕ ನಗರ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮ
17. ಎಚ್ ನಾಗೇಶ್(ತಿಪಟೂರು) ಕರ್ನಾಟಕ ತೆಂಗಿನ ನಾರಿನ ಅಭಿವೃದ್ಧಿ ನಿಗಮ
18. ಎಸ್ ವಿ ರಾಮಚಂದ್ರ(ಜಗಳೂರು) ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮ

19. ನೆಹರೂ ಓಲೇಕಾರ್( ಹಾವೇರಿ) ಬಾಬು ಜಗಜೀವನ್ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ
20. ಐಹೊಳೆ ದುರ್ಯೋಧನ(ರಾಯಭಾಗ) ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ
21. ಲಾಲಾಜಿ ಆರ್ ಟಂಡನ್ (ಕಾಪು) ರಾಜ್ಯ ಹಿಂದುಳಿದ ವರ್ಗಗಳ ಆಯೋಗ
22. ಬಸವರಾಜ ದಡೇಸೂರ್ (ಕನಕಗಿರಿ) ರಾಜ್ಯ ಸಮಾಜ ಕಲ್ಯಾಣ ಅಭಿವೃದ್ಧಿ ಮಂಡಳಿ
23. ಡಾ.ಎಸ್.ಶಿವರಾಜ್ ಪಾಟೀಲ್(ರಾಯಚೂರು) ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ
24.ಸಿ.ಎಸ್.ನಿರಂಜನ್ ಕುಮಾರ್ (ಗುಂಡ್ಲುಪೇಟೆ) ರಾಜ್ಯ ಅರಣ್ಯ ಕೈಗಾರಿಕಾ ನಿಗಮ ನಿಯಮಿತ

Share This Article
Leave a Comment

Leave a Reply

Your email address will not be published. Required fields are marked *