ಶಬರಿಮಲೆ ಹಾದಿಯಲ್ಲಿ ಈ ಬಾರಿ 23 ಮಂದಿ ಹೃದಯಾಘಾತದಿಂದ ಸಾವು

Public TV
1 Min Read

ಪತ್ತನಂತಿಟ್ಟ: ಶಬರಿಮಲೆ(Sabarimala) ಯಾತ್ರೆಯ ಈ ಸೀಸನ್‌ನ ಮೊದಲ 35 ದಿನಗಳಲ್ಲಿ 24 ಮಂದಿ ಸಾವನ್ನಪ್ಪಿದ್ದಾರೆ. ಇವರಲ್ಲಿ 23 ಮಂದಿ ಹೃದಯಾಘಾತದಿಂದ(Heart Attack) ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಇದಕ್ಕೆ ಕೋವಿಡ್‌(Covid 19) ನಂತರದ ಆರೋಗ್ಯ ಸಮಸ್ಯೆಯೇ ಕಾರಣ ಇರಬಹುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಕಡಿದಾದ ಏರಿಳಿತದ ಹಾದಿ ಇರುವ ನೀಲಿಮಲ ಮತ್ತು ಅಪ್ಪಾಚ್ಚಿಮೇಡುಗಳಲ್ಲಿ ಬೆಟ್ಟ ಹತ್ತಬೇಕಾದರೆ ಹೆಚ್ಚಿನ ಜನರು ಅನಾರೋಗ್ಯಕ್ಕೆ ಒಳಗಾಗುತ್ತಿದ್ದಾರೆ. ಇದುವರೆಗೆ ಹೃದಯ ಸಂಬಂಧಿ ಆರೋಗ್ಯ ಸಮಸ್ಯೆಯಿಂದ 106 ಮಂದಿಯನ್ನು ಪಂಪಾದಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವುಗಳು ಕೋವಿಡ್ ನಂತರದ ಆರೋಗ್ಯ ಸಮಸ್ಯೆಗಳಿಗೆ ಸಂಬಂಧಿಸಿರಬಹುದು ಎಂದು ತಜ್ಞರು ಹೇಳುತ್ತಿದ್ದಾರೆ. ಕಡಿದಾದ ಬೆಟ್ಟವನ್ನು ಹತ್ತುವುದರಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳು ಕೋವಿಡ್ ಹೊಂದಿರುವವರಲ್ಲಿ ಗಂಭೀರವಾಗಿರುತ್ತವೆ ಎನ್ನುವುದು ತಜ್ಞ ವೈದ್ಯರ ವಾದ. ಇದನ್ನೂ ಓದಿ: ಆಸ್ಪತ್ರೆಗಳು ಭರ್ತಿ, ಸ್ಮಶಾನದಲ್ಲಿ ಶವಗಳ ರಾಶಿ – ಚೀನಾದಲ್ಲಿ ಕೋವಿಡ್‌ ಸುನಾಮಿಗೆ ಕಾರಣ ಏನು?


ಪಂಪಾ ಮತ್ತು ಸನ್ನಿಧಾನಂ ನಡುವಿನ ಕಾರ್ಡಿಯೋ ಕೇಂದ್ರಗಳಲ್ಲಿ ಕೇವಲ ಆಮ್ಲಜನಕ ಸಿಲಿಂಡರ್‌ಗಳು ಮಾತ್ರ ಇವೆ. ಸೂಕ್ತ ತುರ್ತು ಚಿಕಿತ್ಸೆ ಕೊಡಿಸಲು ಪಂಪಾದಲ್ಲಿರುವ ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕಾದ ಪರಿಸ್ಥಿತಿ ಇದೆ. ಭಕ್ತರ ದಟ್ಟಣೆಯ ಸಮಯದಲ್ಲಿ ಅಂಬುಲೆನ್ಸ್‌ ಈ ಹಾದಿಯಲ್ಲಿ ಹೋಗಲು ಸಾಧ್ಯವಾಗುತ್ತಿಲ್ಲ. ಕೆಲವು ವಾರಗಳ ಹಿಂದೆ, ಇದೇ ರೀತಿ ಅಂಬುಲೆನ್ಸ್‌ ಬರುವಾಗ ನಡೆದ ಕಾಲ್ತುಳಿತದಲ್ಲಿ ಅನೇಕ ಜನರು ಗಾಯಗೊಂಡಿದ್ದರು.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *