ಹಳ್ಳಕ್ಕೆ ನುಗ್ಗಿದ ಸರ್ಕಾರಿ ಬಸ್- 25 ಪ್ರಯಾಣಿಕರಿಗೆ ಗಂಭೀರ ಗಾಯ

Public TV
0 Min Read

ಕಾರವಾರ: ಚಾಲಕನ ನಿಯಂತ್ರಣ ತಪ್ಪಿ ಸರ್ಕಾರಿ ಬಸ್ಸೊಂದು ಹಳ್ಳಕ್ಕೆ ನುಗ್ಗಿದ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಕಡಗೇರಿ ಘಾಟ್ ಬಳಿ ನಡೆದಿದೆ.

ಘಟನೆಯಲ್ಲಿ 25 ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದ್ದು, ಸದ್ಯ ಗಾಯಾಳುಗಳನ್ನು ಹೊನ್ನಾವರದ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಪ್ರಯಾಣಿಕರನ್ನು ತುಂಬಿಕೊಂಡಿದ್ದ ಸರ್ಕಾರಿ ಬಸ್ ಹೊನ್ನಾವರದಿಂದ ಮಾವಿನಕುರ್ವಾಗೆ ಹೊರಟ್ಟಿದ್ದು, ಕಡಗೇರಿ ಘಾಟ್ ಬಳಿ ಈ ಅವಘಡ ಸಂಭವಿಸಿದೆ. ಘಟನೆ ಕುರಿತು ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *