ಕ್ಷುಲ್ಲಕ ಕಾರಣಕ್ಕೆ ತಮ್ಮನನ್ನೇ ಚಾಕುವಿನಿಂದ ಇರಿದು ಕೊಂದ ಅಣ್ಣ

Public TV
1 Min Read

ಬೆಳಗಾವಿ: ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆಯಲ್ಲಿ ಸ್ವಂತ ತಮ್ಮನನ್ನೇ ಚಾಕುವಿನಿಂದ ಇರಿದು ಅಣ್ಣ ಕೊಲೆ ಮಾಡಿರುವ ಘಟನೆ ಗೋಕಾಕ್ ನಗರದಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ನಿವಾಸಿ ಮುನಾಫ್ ದೇಸಾಯಿ(24) ದುರ್ದೈವಿ. 26 ವರ್ಷದ ರಮಜಾನ್ ದೇಸಾಯಿ ತಮ್ಮನನ್ನೇ ಕೊಲೆ ಮಾಡಿದ ಆರೋಪಿ ಅಣ್ಣ. ಭಾನುವಾರ ತಡರಾತ್ರಿ ಮುನಾಫ್ ದೇಸಾಯಿ ತನ್ನ ತಂದೆ-ತಾಯಿಯೊಂದಿಗೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ಮಾಡುತ್ತಿರುವ ವೇಳೆ ಮಧ್ಯಪ್ರವೇಶಿಸಿ ರಮಜಾನ್ ತಂದೆ, ತಾಯಿಯನ್ನು ಯಾಕೆ ಬೈಯ್ಯುತ್ತಿದ್ಯಾ ಎಂದು ಪ್ರಶ್ನಿಸಿದ್ದಾನೆ. ಈ ವೇಳೆ ಇಬ್ಬರ ವಾಗ್ವಾದ ತಾರಕಕ್ಕೇರಿ ಜಗಳ ವಿಕೋಪಕ್ಕೆ ತಿರುಗಿ ಮನೆಯಲ್ಲಿದ್ದ ಚಾಕುವಿನಿಂದ ಮುನಾಫ್ ಹೊಟ್ಟೆಗೆ ರಮಜಾನ್ ಇರಿದಿದ್ದಾನೆ. ಇದನ್ನೂ ಓದಿ: ಇಂದಿನಿಂದ ಶಾಲೆ ಆರಂಭ – ಈ ವರ್ಷವೂ ಮಕ್ಕಳಿಗಿಲ್ಲ ಸೈಕಲ್ ಭಾಗ್ಯ

ಇದರಿಂದ ತೀವ್ರವಾಗಿ ಗಾಯಗೊಂಡ ಮುನಾಫ್‍ನನ್ನು ಆತನ ಪೋಷಕರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮುನಾಫ್ ಸಾವನ್ನಪ್ಪಿದ್ದಾನೆ. ಸದ್ಯ ಆರೋಪಿ ರಮಜಾನ್‍ನನ್ನು ಗೋಕಾಕ್ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಘಟನಾ ಸ್ಥಳಕ್ಕೆ ಗೋಕಾಕ್ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಗೋಕಾಕ್ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಯುವತಿಯರೊಂದಿಗೆ ಕುಣಿದು ಕುಪ್ಪಳಿಸಿದ MLA ಗೋಪಾಲ್ ಮಂಡಲ್ – ವೀಡಿಯೋ ವೈರಲ್

Share This Article
Leave a Comment

Leave a Reply

Your email address will not be published. Required fields are marked *