ಜಾತ್ರೆಯಲ್ಲಿ ಪ್ರಸಾದ ಸೇವಿಸಿ 28 ಮಂದಿ ಅಸ್ವಸ್ಥ

Public TV
1 Min Read

ಚಂಡೀಗಢ: ಫರೂಖ್‍ನಗರ ಸಮೀಪದ ಮುಬರಿಕ್‍ಪುರದಲ್ಲಿ ನಡೆದ ಜಾತ್ರೆಯಲ್ಲಿ ದೇವಸ್ಥಾನವೊಂದರ ಪ್ರಸಾದ ಸೇವಿಸಿ ಮಕ್ಕಳು ಸೇರಿದಂತೆ ಸುಮಾರು 28 ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮಂಗಳವಾರ ರಾತ್ರಿ ಜಾತ್ರೆಗೆ ಬಂದಿದ್ದ ಜನರಿಗೆ ಜ್ಯೂಸ್ ನೀಡಲಾಗಿತ್ತು. ಜ್ಯೂಸ್ ಕುಡಿದ ನಂತರ 8ರಿಂದ 10 ಮಕ್ಕಳು ಸೇರಿದಂತೆ 28 ಮಂದಿ ಅಸ್ವಸ್ಥರಾಗಿದ್ದಾರೆ. ನಂತರ ಅವರನ್ನು ಕೂಡಲೇ ಸಮೀಪದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಇದನ್ನೂ ಓದಿ: ಈಶ್ವರಪ್ಪ ರಾಜೀನಾಮೆಗೆ ಬಿಗಿಪಟ್ಟು- ಇಂದು ರಾಜ್ಯಪಾಲರಿಗೆ ಕಾಂಗ್ರೆಸ್ ದೂರು

ಇದೀಗ ಅಸ್ವಸ್ಥಗೊಂಡವರಿಗೆ ಪ್ರಥಮ ಚಿಕಿತ್ಸೆ ನೀಡಲಾಗಿದ್ದು, ಎಲ್ಲರ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಲಾಗುತ್ತಿದೆ. ಸದ್ಯ ಈ ಸಂಬಂಧ ಇದೀಗ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇದನ್ನೂ ಓದಿ: ಸಂತೋಷ್ ಪಾಟೀಲ್ ಆತ್ಮಹತ್ಯೆ ಕೇಸ್ – ಈಶ್ವರಪ್ಪ ವಿರುದ್ಧ ಎಫ್‍ಐಆರ್ ದಾಖಲು

Share This Article
Leave a Comment

Leave a Reply

Your email address will not be published. Required fields are marked *