ಬ್ರಿಡ್ಜ್ ಮೇಲಿಂದ ನದಿಗೆ ಉರುಳಿಬಿದ್ದ ಬಸ್- ಮೂವರ ಸಾವು

Public TV
1 Min Read

ತಿರುವನಂತಪುರಂ: ಬಸ್‍ವೊಂದು ಬ್ರಿಡ್ಜ್ ಮೇಲಿಂದ ನದಿಗೆ ಉರುಳಿದ ಪರಿಣಾಮ ಮೂವರು ಸಾವನ್ನಪ್ಪಿರುವ ದಾರುಣ ಘಟನೆ ಕೇರಳದ ಕಣ್ಣೂರಿನಲ್ಲಿ ನಡೆದಿದೆ.

ಇಂದು ಬೆಳಗ್ಗೆ 6 ಗಂಟೆ ಸುಮಾರಿಗೆ ಇಲ್ಲಿನ ಪೆರಿಂಗತೂರ್‍ನ ಮಯ್ಯಾಜಿ ನದಿಗೆ ಬಸ್ ಉರುಳಿ ಬಿದ್ದಿದೆ. ಬಸ್‍ನ ಕ್ಲೀನರ್ ಹಾಗೂ ಒಬ್ಬ ಮಹಿಳೆ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಮತ್ತೋರ್ವ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ. ಗಾಯಗೊಂಡಿದ್ದ ಬಸ್ ಚಾಲಕನನ್ನು ರಕ್ಷಣೆ ಮಾಡಲಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಸ್ ಬೆಂಗಳೂರಿನಿಂದ ತಲಸ್ಸೆರಿಗೆ ಬರುತ್ತಿದ್ದ ವೇಳೆ ಪೆರಿಂಗತೂರ್ ಬ್ರಿಡ್ಜ್ ಮೇಲಿಂದ ತಡೆಗೋಡೆ ಡಿಕ್ಕಿ ಹೊಡೆದು ನದಿಗೆ ಬಿದ್ದಿದೆ. ಘಟನೆ ನಡೆದ ವೇಳೆ ಬಸ್ಸಿನಲ್ಲಿ ಇಬ್ಬರು ಪ್ರಯಾಣಿಕರು ಮಾತ್ರ ಇದ್ದರು ಎಂದು ವರದಿಯಾಗಿದೆ. ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ಮುಂದುವರೆಸಿದ್ದಾರೆ.

ಮೊದಲಿಗೆ ರಕ್ಷಣಾ ಕಾರ್ಯಾಚರಣೆ ವಿಳಂಬವಾಗಿದ್ದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ರು. ನಂತರ ಪೊಲೀಸರು ಪರಿಸ್ಥಿತಿ ನಿಯಂತ್ರಿಸಬೇಕಾಯಿತು. ಅಪಘಾತದಿಂದಾಗ ರಸ್ತೆಯಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.

Share This Article
Leave a Comment

Leave a Reply

Your email address will not be published. Required fields are marked *