ಕಾರ್, ಕಂಟೇನರ್ ಮುಖಾಮುಖಿ ಡಿಕ್ಕಿ- ಮೂವರು ಸಾವು!

Public TV
1 Min Read

ಬೀದರ್: ಕಾರು ಮತ್ತು ಕಂಟೇನರ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ ಘಟನೆ ನಸುಕಿನ ಜಾವ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 9ರ ಕೌಡಿಯಾಳ ಬಳಿ ಸಂಭವಿಸಿದೆ.

ರಾಜೇಂದ್ರ ಶಿವಲಿಂಗಪ್ಪಾ ಚಿತಕೋಟೆ(52), ಶ್ರೀಧರ್ ಚಿತಕೋಟೆ(32) ಹಾಗೂ ಸಂತೋಷ್ ಕಾರಮೋರೆ (40) ಮತ ದುರ್ದೈವಿಗಳು. ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ತಾಲೂಕು ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೂಲತಃ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಹೊದಲೂರು ಗ್ರಾಮದವರು ಸಂಬಂಧಿಕರ ಮದುವೆಗೆಂದು ಮಹಾರಾಷ್ಟ್ರಕ್ಕೆ ಹೊರಟಿದ್ದ ವೇಳೆ ಈ ಅವಘಡ ಸಂಭವಿಸಿದೆ. ಕಾರು ಓವರ್ ಟೆಕ್ ಮಾಡಿ ಮುಂದೆ ಸಾಗುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

ಈ ಕುರಿತು ಬಸವಕಲ್ಯಾಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *