ಈಜಲು ತೆರಳಿದ್ದ ಮೂವರು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮಂಗಳೂರಿನಲ್ಲಿ ನೀರುಪಾಲು

Public TV
0 Min Read

ಮಂಗಳೂರು: ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲಾದ ಘಟನೆ ಕೊಣಾಜೆ ಠಾಣೆ ವ್ಯಾಪ್ತಿಯ ಇನ್ನೋಳಿ ಸಮೀಪದ ನೇತ್ರಾವತಿ ನಡುಗಡ್ಡೆಯ ಬಳಿ ನಡೆದಿದೆ.

ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಾದ ಬೆಳ್ತಂಗಡಿ ನಿವಾಸಿ ವಿಶಾಲ್ (21), ಬಿಹಾರ ಮೂಲದ ಶುಭಂ(22), ಚಿತ್ರದುರ್ಗ ಮೂಲದ ಶ್ರೀರಾಮ್(22) ಮೃತ ದುರ್ದೈವಿಗಳು.

ಎಂಟು ಮಂದಿಯ ವಿದ್ಯಾರ್ಥಿಗಳ ಗುಂಪೊಂದು ನೇತ್ರಾವತಿ ನದಿಯಲ್ಲಿ ಸೋಮವಾರ ಈಜಾಟಕ್ಕೆ ತೆರಳಿದ್ದರು. ಈ ವೇಳೆ ಸ್ಥಳೀಯರಿಂದ ಐವರು ವಿದ್ಯಾರ್ಥಿಗಳ ರಕ್ಷಣೆ ಮಾಡಿದ್ದಾರೆ. ಮೂವರು ಸಾವನ್ನಪ್ಪಿದ್ದಾರೆ. ಓರ್ವ ವಿದ್ಯಾರ್ಥಿಯ ಶವ ಪತ್ತಯಾಗಿದ್ದು ಇನ್ನಿಬ್ಬರ ಶವಕ್ಕಾಗಿ ಶೋಧ ಕಾರ್ಯ ನಡೆಯುತ್ತಿದೆ.

Share This Article
Leave a Comment

Leave a Reply

Your email address will not be published. Required fields are marked *