ಬಸ್ಸಿನಲ್ಲಿ ಬಿಟ್ಟು ಹೋಗಿದ್ದ 3 ಲಕ್ಷದ ಚಿನ್ನಾಭರಣ – ಪ್ರಯಾಣಿಕನಿಗೆ ಮರಳಿಸಿ ಮಾನವೀಯತೆ ಮೆರೆದ ಕಂಡಕ್ಟರ್

Public TV
1 Min Read

ಬೀದರ್: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಪ್ರಯಾಣಿಕ ಮರೆತು ಹೋಗಿದ್ದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಮರಳಿಸಿ ಕಂಡಕ್ಟರ್ ಮಾನವೀಯತೆ ಮೆರೆದ ಘಟನೆ ಬೀದರ್‌ನಲ್ಲಿ (Bidar) ನಡೆದಿದೆ.ಇದನ್ನೂ ಓದಿ: Mangaluru| ಖಾಸಗಿ ಬೀಚ್ ರೆಸಾರ್ಟ್‌ನ  ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರ ದುರ್ಮರಣ

ಭಾಲ್ಕಿ (Bhalki) ನಿಲ್ದಾಣದಿಂದ ಮಹಾರಾಷ್ಟ್ರದ (Maharashtra) ನಿಲಂಗಾಕ್ಕೆ ಪ್ರಯಾಣ ಬೆಳೆಸಿದ್ದ ಮಹ್ಮದ್ 3 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಬಸ್ಸಿನಲ್ಲಿ ಮೆರೆತು ಹೋಗಿದ್ದರು. ಚಿನ್ನಾಭರಣ ಬಸ್ಸಿನಲ್ಲಿ ಬಿಟ್ಟಿದ್ದು, ನೆನಪಾದ ಬಳಿಕ ಗಾಬರಿಗೊಂಡು ಬಸ್ ನಿಲ್ದಾಣಕ್ಕೆ ವಾಪಸಾಗಿದ್ದಾರೆ. ಬಳಿಕ ನಿರ್ವಾಹಕ ಪ್ರಕಾಶ ಹತ್ತಿರ ಚಿನ್ನಾಭರಣ ಸುರಕ್ಷಿತವಾಗಿರುವ ವಿಷಯ ಗೊತ್ತಾಗಿ ನಿಟ್ಟುಸಿರುಬಿಟ್ಟಿದ್ದಾರೆ.

ಬೀದರ್ ಜಿಲ್ಲೆಯ ಭಾಲ್ಕಿ ಡಿಪೋದ ಬಸ್‌ನಲ್ಲಿ ಚಿನ್ನಾಭರಣ ಮರೆತು ಹೋಗಿದ್ದ ಪ್ರಯಾಣಿಕನಿಗೆ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಮರಳಿ ಕೊಟ್ಟು ನಿರ್ವಾಹಕ ಮಾನವೀಯತೆ ಮರೆದಿದ್ದಾರೆ. ಪ್ರಕಾಶ ಪ್ರಮಾಣಿಕತೆಗೆ ಮೆಚ್ಚಿ ಪ್ರಯಾಣಿಕ ಮಹ್ಮದ್ ಅಜರ್ ಹಾಗೂ ಸಾರಿಗೆ ಅಧಿಕಾರಿಗಳು ಚಾಲಕ ಹಾಗೂ ನಿರ್ವಾಹಕನನ್ನು ಸನ್ಮಾಸಿ ಗೌರವಿಸಿದ್ದಾರೆ.ಇದನ್ನೂ ಓದಿ: ರೈಲು ವಿಳಂಬ – ಸರಿಯಾದ ಸಮಯಕ್ಕೆ ವರನನ್ನು ಮದುವೆಗೆ ಕರೆದೊಯ್ದ ರೈಲ್ವೇ ಇಲಾಖೆ

Share This Article