ಶಿವಮೊಗ್ಗದಲ್ಲಿ ನಿಧಿ ಆಸೆಗೆ ನರಬಲಿ- ಆರೋಪಿಗಳ ಬಂಧನ

Public TV
1 Min Read

ಶಿವಮೊಗ್ಗ: ನಿಧಿಯಾಸೆಗಾಗಿ ನರಬಲಿ ಕೊಟ್ಟಿರುವ ಆಘಾತಕಾರಿ ಘಟನೆ ಜಿಲ್ಲೆಯ ಶಿಕಾರಿಪುರ ತಾಲೂಕಿನ ಅಂಜನಾಪುರದಲ್ಲಿ ನಡೆದಿದೆ.

ಕೇಶ್ಯನಾಯ್ಕ್(65) ನಿಧಿಯಾಸೆಗೆ ಬಲಿಯಾದ ವ್ಯಕ್ತಿ. ಸ್ಥಳಿಯರಾದ ರಂಗಪ್ಪ, ಶೇಖರಪ್ಪ, ಮಂಜುನಾಥ ಹಾಗೂ ಗೌಸ್ ಪೀರ್ ಎಂಬವರಿಂದ ಈ ಕೃತ್ಯ ನಡೆದಿದೆ. ಶಿಕಾರಿಪುರ ಗ್ರಾಮಾಂತರ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಕಾಡಿನ ಹೊಳೆ ದಂಡೆಯಲ್ಲಿ ಇರುವ ಹೊನ್ನೇಮರ ಚೌಡಮ್ಮ ದೇವಾಲಯದ ಬಳಿ ನಿಧಿ ಇದೆ ಎಂದು ಆರೋಪಿಗಳು ನಂಬಿದ್ದರು. ನರಬಲಿ ಕೊಟ್ಟರೆ ಈ ನಿಧಿ ಪಡೆಯಬಹುದು ಎಂಬ ಮೂಢನಂಬಿಕೆಯಿಂದ ಈ ಕೃತ್ಯ ನಡೆದಿದೆ.

ಇದೇ ತಿಂಗಳ 7ರಂದು ರುಂಡವಿಲ್ಲದ ಶವ ಪತ್ತೆಯಾಗಿದ್ದು, ಶಿಕಾರಿಪುರ ಗ್ರಾಮಾಂತರ ಪೊಲೀಸರು ಈ ಬಗ್ಗೆ ತನಿಖೆ ನಡೆಸಿದಾಗ ನರಬಲಿ ಪ್ರಕರಣ ಬೆಳಕಿಗೆ ಬಂದಿದೆ.

Share This Article
Leave a Comment

Leave a Reply

Your email address will not be published. Required fields are marked *