ಟಿಟಿ ವಾಹನಕ್ಕೆ ಲಾರಿ ಡಿಕ್ಕಿ- ಬೆಂಗ್ಳೂರಿನ ಮೂವರು ವಿದ್ಯಾರ್ಥಿಗಳ ದುರ್ಮರಣ

Public TV
1 Min Read

ಚಿತ್ರದುರ್ಗ: ನಗರದ ಜಿಎಂಟಿ ವೃತ್ತದ ಬಳಿ ಟಿಟಿ ವಾಹನಕ್ಕೆ ಲಾರಿ ಡಿಕ್ಕಿಯಾಗಿ ಮೂವರು ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ.

ಬೆಂಗಳೂರು ಮೂಲದ ಕಾರ್ತಿಕ್ ಗೌಡ(20), ಹರ್ಷ(20), ಶ್ರೀನಿಧಿ(20) ಮೃತ ದುರ್ದೈವಿಗಳು. ಘಟನೆಯಲ್ಲಿ 6 ಮಂದಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಬೆಂಗಳೂರಿನ ಬಸವನಗುಡಿಯ ವಿಜಯ ಕಾಲೇಜಿನ ಅಂತಿಮ ವರ್ಷದ 13 ಮಂದಿ ಕಾಮರ್ಸ್ ವಿದ್ಯಾರ್ಥಿಗಳು ಏಪ್ರಿಲ್ 19 ರಂದು ಗೋಕರ್ಣ ಟ್ರಿಪ್ ತೆರಳಿದ್ದರು. ಗೋಕರ್ಣದಿಂದ ಬೆಂಗಳೂರಿಗೆ ಹಿಂದಿರುಗುವಾಗ ಟೈಯರ್ ಬ್ಲಾಸ್ಟ್ ಆಗಿ ಟಿಟಿ ವಾಹನ ಕೆಟ್ಟು ನಿಂತಿತ್ತು. ಈ ವಾಹನಕ್ಕೆ ಹಿಂದಿನಿಂದ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಟಿಟಿವಾಹನದ ಬಳಿಯಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Share This Article
Leave a Comment

Leave a Reply

Your email address will not be published. Required fields are marked *