ಬ್ಯಾಗ್‍ ನಲ್ಲಿ ಕಂತೆ ಕಂತೆ ಹಣ, ಅನುಮಾನಾಸ್ಪದವಾಗಿ ಓಡಾಡ್ತಿದ್ದ 3 ಯುವಕರು ಮಂಡ್ಯ ಪೊಲೀಸರ ವಶಕ್ಕೆ

Public TV
1 Min Read

– ಬೆಂಗ್ಳೂರು ಎಟಿಎಂ ಪ್ರಕರಣಕ್ಕೆ ನಂಟು?

ಮಂಡ್ಯ: ದಾಖಲೆಯಿಲ್ಲದ ಲಕ್ಷಾಂತರ ರೂಪಾಯಿ ಹಣ ಇಟ್ಟುಕೊಂಡಿದ್ದ ಮೂವರು ಯುವಕರನ್ನು ಮಂಡ್ಯ ಜಿಲ್ಲೆ ಮಳವಳ್ಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮೂವರು ಯುವಕರು ಬ್ಯಾಗ್ ನಲ್ಲಿ ಲಕ್ಷಾಂತರ ರೂಪಾಯಿ ಹಣ ಇಟ್ಟುಕೊಂಡು ಮಳವಳ್ಳಿಯಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದರು. ಮದ್ಯಪಾನ ಮಾಡಿ ಪರಸ್ಪರ ಜಗಳವಾಡುತ್ತಿದ್ದರು. ಇದನ್ನು ಗಮನಿಸಿದ ಪೊಲೀಸರು ಯುವಕರನ್ನು ವಿಚಾರಿಸಲು ಮುಂದಾದರು.

ಈ ವೇಳೆ ಮೂವರು ಯುವಕರು ಅಲ್ಲಿಯೇ ಇದ್ದ ಬಟ್ಟೆ ಅಂಗಡಿಯೊಳಗೆ ಹೋಗಿ ಅವಿತುಕೊಳ್ಳಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಮತ್ತು ಸ್ಥಳೀಯರು ಸೇರಿ ಯುವಕರನ್ನು ಹಿಡಿದು ಬ್ಯಾಗ್ ಪರಿಶೀಲನೆ ನಡೆಸಿದಾಗ ಕಂತೆ ಕಂತೆ ಹಣ ಪತ್ತೆಯಾಗಿದೆ.

ಹಣದ ಬಗ್ಗೆ ಯಾರೂ ಸಮರ್ಪಕ ಉತ್ತರ ನೀಡಿಲ್ಲ. ಈ ಹಣಕ್ಕೆ ಬೆಂಗಳೂರಿನ ಜಾಲಹಳ್ಳಿ ಎಟಿಎಂ ದರೋಡೆ ಪ್ರಕರಣದ ನಂಟು ಇರಬಹುದು ಎಂದು ಶಂಕಿಸಲಾಗಿದೆ.

ಬೆಂಗ್ಳೂರಲ್ಲಿ ಎಟಿಎಂ ಹಣ ದರೋಡೆ: ಎಟಿಎಂ ಗೆ ಹಣ ತುಂಬುವ ವೇಳೆ 18 ಲಕ್ಷ ರೂ. ಕಸಿದು ಪರಾರಿಯಾದ ಘಟನೆ ನಗರದ ಜಾಲಹಳ್ಳಿ ಕ್ರಾಸ್ ಬಳಿ ಸೋಮವಾರದಂದು ನಡೆದಿತ್ತು. ಬೆಳಗ್ಗೆ 6 ಗಂಟೆ ಸುಮಾರಿಗೆ ಐಸಿಐಸಿಐ ಬ್ಯಾಂಕ್ ಎಟಿಎಂಗೆ ಹಣ ತುಂಬಿಸುವ ವೇಳೆ 220 ಪಲ್ಸರ್ ಬೈಕ್‍ನಲ್ಲಿ ಹೆಲ್ಮಟ್ ಧರಿಸಿ ಬಂದಿದ್ದ ದುಷ್ರ್ಕಮಿಗಳು ಸೆಕ್ಯೂರ್ ವೆಲ್ ಏಜೆನ್ಸಿಯ ಮೂವರು ಸಿಬ್ಬಂದಿ ಮೇಲೆ ದಾಳಿ ನಡೆಸಿದ್ದರು. ಪ್ರತಿರೋಧ ಒಡಿದ್ದಕ್ಕೆ ಕಸ್ಟೋಡಿಯನ್ ಮೋಹನ್ ಅವರಿಗೆ ಚಾಕುವಿನಿಂದ ಇರಿದ ದುಷ್ರ್ಕಮಿಗಳು 18 ಲಕ್ಷ ರೂ. ಕಸಿದು ಪರಾರಿಯಾಗಿದ್ದರು.

ಮೋಹನ್, ಸಾಗರ್ ಹಾಗೂ ಪ್ರಸನ್ನ ಸೆಕ್ಯೂರ್ ವೆಲ್ ಏಜ್ಸೇನಿಯ ಸಿಬ್ಬಂದಿಗಳು. ಎಟಿಎಂಗೆ ಹಣ ತುಂಬಲು ಒಟ್ಟು 1 ಕೋಟಿ, 25 ಲಕ್ಷ ರೂ. ಹಣ ತಂದಿದ್ದರು. ದುಷ್ಕರ್ಮಿಗಳು ಅದರಲ್ಲಿ 18 ಲಕ್ಷ, 50 ಸಾವಿರ ರೂ. ಹಣದ ಬ್ಯಾಗ್ ಕಸಿದು ಪರಾರಿಯಾಗಿದ್ದರು. ಈ ಘಟನೆ ಕುರಿತು ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *