ಬಿಸಿಯೂಟ ಸೇವಿಸಿದ್ದ 30 ಮಕ್ಕಳು ರಾತ್ರಿ ಅಸ್ವಸ್ಥ

Public TV
1 Min Read

ಬೆಳಗಾವಿ: ಬಿಸಿಯೂಟ ಸೇವಿಸಿದ್ದ ಮಕ್ಕಳು ರಾತ್ರಿ ಅಸ್ವಸ್ಥರಾದ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮರಡಿ ನಾಗಲಾಪುರದಲ್ಲಿ ನಡೆದಿದೆ.

ನಾಗಲಾಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶುಕ್ರವಾರ ಮಕ್ಕಳು ಮಧ್ಯಾಹ್ನ ಬಿಸಿಯೂಟ ಸೇವಿಸಿದ್ದಾರೆ. ಶಾಲೆಯ ಅವಧಿ ಮುಗಿದ ನಂತರ ರಾತ್ರಿ ಮಕ್ಕಳಿಗೆ ವಾಂತಿ ಹಾಗೂ ಭೇದಿ ಆರಂಭವಾಗಿದೆ. ತಕ್ಷಣ ಕುಟುಂಬಸ್ಥರು ಮಕ್ಕಳನ್ನು ಸರ್ಕಾರಿ ಆಸ್ಪತ್ರೆಗೆ ಸೇರಿಸಿದ್ದಾರೆ.

ಬಿಸಿಯೂಟ ಸೇವಿಸಿ 30 ಮಕ್ಕಳು ಅಸ್ವಸ್ಥರಾಗಿದ್ದು, ಅವರನ್ನು ಹಿರೇಬಾಗೇವಾಡಿ ಆಸ್ಪತ್ರೆಗೆ ರವಾನಿಸಲಾಗಿದೆ. ಕಳೆದ ರಾತ್ರಿಯೇ ಮಕ್ಕಳಿಗೆ ಚಿಕಿತ್ಸೆ ನೀಡಲಾಗಿದೆ. ಆಸ್ಪತ್ರೆಗೆ ಶಾಸಕ ಮಹಾಂತೇಶ ದೊಡ್ಡಗೌಡರ ಭೇಟಿ ನೀಡಿ ಮಕ್ಕಳ ಆರೋಗ್ಯವನ್ನು ವಿಚಾರಿಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *