30 ಲಕ್ಷ ಹಣ ದುರ್ಬಳಕೆ ಆರೋಪ – ದೇವದುರ್ಗ ಬಿಇಓ ಅಮಾನತು

Public TV
1 Min Read

ರಾಯಚೂರು: ನಿಯಮ ಬಾಹಿರವಾಗಿ ಲಕ್ಷಾಂತರ ರೂಪಾಯಿ ಹಣ ದುರ್ಬಳಕೆ ಹಾಗೂ ಕರ್ತವ್ಯ ಲೋಪ ಆರೋಪದ ಹಿನ್ನೆಲೆ ರಾಯಚೂರಿನ (Raichuru) ದೇವದುರ್ಗದ (Devadurga) ಕ್ಷೇತ್ರ ಶಿಕ್ಷಣಾಧಿಕಾರಿ ಸುಖದೇವ (Sukhadeva) ಅವರನ್ನು ಅಮಾನತು ಮಾಡಲಾಗಿದೆ.ಇದನ್ನೂ ಓದಿ: ಅನುದಾನ ಕೊಟ್ಟವರ ಕಡೆ ನಾನು: ಕಾಂಗ್ರೆಸ್‌ ಪರ ಎಸ್‌ಟಿಎಸ್‌ ಬ್ಯಾಟಿಂಗ್‌

ದೇವದುರ್ಗದ ಊಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಾಗಿ ಜಮೀನು ಖರೀದಿ ಹಾಗೂ ಕಟ್ಟಡ ನಿರ್ಮಾಣಕ್ಕಾಗಿ ಹಟ್ಟಿ ಚಿನ್ನದ ಗಣಿ ಕಂಪನಿ ದೇಣಿಗೆ ರೂಪದಲ್ಲಿ 30 ಲಕ್ಷ ರೂ.ಯನ್ನು ನೀಡಿತ್ತು. ಆ ಹಣವನ್ನು ಸ್ವಂತ ಖಾತೆಗೆ ಜಮಾ ಮಾಡಿಕೊಂಡಿದಲ್ಲದೇ, ನಿಯಮ ಬಾಹಿರವಾಗಿ ಬಳಕೆ ಮಾಡಿದ್ದರು.

ಸರ್ಕಾರದಿಂದ ನೀಡಲಾದ ಮೊಬೈಲ್ ಸಂಖ್ಯೆ ಸದಾ ಸ್ವಿಚ್ಡ್ ಆಫ್ ಇಡುತ್ತಿದ್ದು, ಸಹ ಶಿಕ್ಷಕರು, ಸಾರ್ವಜನಿಕರಿಗೆ ಸರಿಯಾದ ರೀತಿ ಸ್ಪಂದನೆ ನೀಡುತ್ತಿರಲಿಲ್ಲ. ಈ ಆರೋಪಗಳ ಹಿನ್ನೆಲೆ ಬಿಇಓ ಸುಖದೇವರನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಧೀನ ಕಾರ್ಯದರ್ಶಿಗಳು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.ಇದನ್ನೂ ಓದಿ: ಕಂದ ನನ್ನ ಒಡಲಲ್ಲಿ, ನಾನು ಅಮ್ಮನ ಮಡಿಲಲ್ಲಿ: ತಾಯ್ತನದ ಖುಷಿಯಲ್ಲಿ ಹರಿಪ್ರಿಯಾ

Share This Article