4 ದಿನದ ಮಗುವಿಗೆ ಬ್ಲಡ್ ಕ್ಯಾನ್ಸರ್ -ಶಿವಮೊಗ್ಗ ಟು ಮಣಿಪಾಲ್ ಝೀರೋ ಟ್ರಾಫಿಕ್‍

Public TV
1 Min Read

ಶಿವಮೊಗ್ಗ : ರಕ್ತದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ನಾಲ್ಕು ದಿನದ ಮಗುವನ್ನು ಶಿವಮೊಗ್ಗದಿಂದ ಮಣಿಪಾಲ್ ಆಸ್ಪತ್ರೆಗೆ ಅಂಬ್ಯುಲೆನ್ಸ್ ಮೂಲಕ ಝೀರೋ ಟ್ರಾಫಿಕ್ ನಲ್ಲಿ ರವಾನೆ ಮಾಡಲಾಯಿತು.

ಶಿವಮೊಗ್ಗದ ಸಹ್ಯಾದ್ರಿ ನಾರಾಯಣ ಹೃದಯಾಲಯದಿಂದ ಮಣಿಪಾಲ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಭದ್ರಾವತಿಯ ಅಶ್ವಥ್ ನಗರದ ದೇವೆಂದ್ರ ಮತ್ತು ಸುಪ್ರಿಯಾ ದಂಪತಿಗೆ ನಾಲ್ಕು ದಿನದ ಹಿಂದೆ ಹೆಣ್ಣು ಮಗು ಜನಿಸಿತ್ತು. ಜನಿಸಿದ ಸಮಯದಲ್ಲಿಯೇ ಹಸುಗೂಸು ತನ್ನೂಂದಿಗೆ ರಕ್ತದ ಕ್ಯಾನ್ಸರ್ ಹೂತ್ತು ತಂದಿದೆ. ಇದನ್ನು ಪತ್ತೆ ಹಚ್ಚಿದ ವೈದ್ಯರು ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ್ ನ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.

ಮಗುವನ್ನು ಶಿವಮೊಗ್ಗದಿಂದ ಮಣಿಪಾಲ್ ವರೆಗೂ ಝೀರೋ ಟ್ರಾಫಿಕ್ ವ್ಯವಸ್ಥೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಾಂತರಾಜು ಮಾಡಿದ್ದರು. ಶಿವಮೊಗ್ಗದಿಂದ ಉಡುಪಿಯ ಗಡಿ ಭಾಗದ ತನಕ ಶಿವಮೊಗ್ಗ ಜಿಲ್ಲೆಯ ಪೊಲೀಸರು ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಿದ್ದರು. ನಂತರ ಉಡುಪಿ ಪೊಲೀಸರು ಝೀರೋ ಟ್ರಾಫಿಕ್ ನಲ್ಲಿ ಕರೆದುಕೊಂಡು ಹೋಗಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *