4 ಶಾಲೆಯ ಮಕ್ಕಳಿಗೆ ಟ್ಯಾಬ್ ವಿತರಿಸಿದ ಕೆಹೆಚ್ ಪುಟ್ಟಸ್ವಾಮಿಗೌಡ

Public TV
1 Min Read

ಚಿಕ್ಕಬಳ್ಳಾಪುರ: ಪಬ್ಲಿಕ್ ಟಿವಿ ಹಾಗೂ ರೋಟರಿ ಸಂಸ್ಥೆ ಸಹಯೋಗದ ಜ್ಞಾನದೀವಿಗೆ ಕಾರ್ಯಕ್ರಮದ ಮೂಲಕ ರಾಜ್ಯದ ಸರ್ಕಾರಿ ಶಾಲೆಯ ಎಸ್‍ಎಸ್‍ಎಲ್‍ಸಿ ಮಕ್ಕಳಿಗೆ ಉಚಿತ ಟ್ಯಾಬ್ ಕಾರ್ಯ ಇಂದು ಸಹ ಮುಂದುವರಿದಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಕಾದಲವೇಣಿ, ಕುರೂಡಿ, ರಮಾಪುರ ಹಾಗೂ ಹುದುಗೂರು ಶಾಲೆಯ ವಿದ್ಯಾರ್ಥಿಗಳಿಗೆ ಇಂದು ಕೆಹೆಚ್‍ಪಿ ಫೌಂಡೇಶನ್ ಅಧ್ಯಕ್ಷ ಕೆಹೆಚ್ ಪುಟ್ಟಸ್ವಾಮಿಗೌಡ ಉಚಿತ ಟ್ಯಾಬ್ ಗಳನ್ನ ವಿತರಿಸಿದರು. ಈ ಹಿಂದೆ ಸಹ 4 ಶಾಲೆಯ 410 ಮಕ್ಕಳಿಗೆ 205 ಟ್ಯಾಬ್ ವಿತರಿಸಿದ್ದ ಪುಟ್ಟಸ್ವಾಮಿಗೌಡ ಅವರು ಇಂದು ಸಹ 4 ಶಾಲೆಯ 175 ಮಕ್ಕಳಿಗೆ 87 ಟ್ಯಾಬ್ ವಿತರಿಸಿದರು.

ಪಬ್ಲಿಕ್ ಟಿವಿಯ ಜ್ಞಾನದೀವಿಗೆ ಕಾರ್ಯಕ್ರಮ ಜನಮೆಚ್ಚುಗೆಗೆ ಪಾತ್ರವಾಗಿ ಯಶಸ್ವಿಯಾಗಿ ಸಾಗುತ್ತಿದ್ದು, ಸರ್ಕಾರಿ ಶಾಲೆಯ ಹತ್ತನೇ ತರಗತಿಯ ಮಕ್ಕಳು ಈ ಬಾರಿ ಟ್ಯಾಬ್ ಸಹಾಯದಿಂದ ಅತೀ ಹೆಚ್ಚಿನ ಅಂಕ ಪಡೆದು ಪಾಸಾಗುವುದರ ಜೊತೆಗೆ ಶಾಲೆಗೆ ಹೆತ್ತ ತಂದೆ-ತಾಯಿಗೆ ಕೀರ್ತಿ ತರುವಂತೆ ವಿದ್ಯಾರ್ಥಿಗಳಿಗೆ ಪುಟ್ಟಸ್ವಾಮಿಗೌಡ ಹಿತನುಡಿಗಳನ್ನ ತಿಳಿಸಿದರು.

ಪಬ್ಲಿಕ್ ಟಿವಿಯ ಸಮಾಜಮುಖಿ ಕಾರ್ಯಕ್ಕೆ ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು ಅಭಿನಂದನೆಗಳನ್ನ ಸಲ್ಲಿಸಿದರು.

Share This Article
Leave a Comment

Leave a Reply

Your email address will not be published. Required fields are marked *