ವಿಚ್ಛೇದನಕ್ಕಾಗಿ ಕೋರ್ಟ್ ಮೆಟ್ಟಿಲೇರಿದ್ದ 4 ದಂಪತಿ – ಜಡ್ಜ್ ಎದುರೇ ವಿರಸ ಮರೆತು ಮತ್ತೆ ಒಂದಾದ ಜೋಡಿಗಳು

Public TV
1 Min Read

ಕೊಪ್ಪಳ: ಗಂಡ-ಹೆಂಡತಿ ಜಗಳ ಉಂಡು ಮಲಗೋವರೆಗೆ ಎಂಬ ಮಾತಿದೆ. ಗಾದೆಯ ಸಾರದಂತೆ ಸಣ್ಣ-ಪುಟ್ಟ ಮನಃಸ್ತಾಪಗಳನ್ನ ಮನೆಯಲ್ಲೇ ಮುಗಿಸಿಕೊಳ್ಳುವ ಬದಲಿಗೆ ಈ ನಾಲ್ಕು ಜೋಡಿ, ಕೋರ್ಟ್ (Court) ಮೆಟ್ಟಿಲೇರಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ರು. ವಿಚ್ಛೇದನ ಕೇಳಿದ್ದ ನಾಲ್ಕು ಜೋಡಿ ಕೋರ್ಟ್ ಆವರಣದಲ್ಲೇ ಮತ್ತೆ ಒಂದಾಗಿದ್ದಾರೆ.

ಹೌದು. 4 ಜೋಡಿಯ ವಿವಾಹ ವಿಚ್ಛೇದನ (Divorce) ಕ್ಕೆ ಏಕಕಾಲಕ್ಕೆ ಸುಖಾಂತ್ಯ ಕಂಡಿರೋ ಅಪರೂಪದ ಪ್ರಕರಣ ಕೊಪ್ಪಳದ ಗಂಗಾವತಿಯ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ನಡೆದಿದೆ. ಸಣ್ಣ-ಪುಟ್ಟ ಜಗಳ ಮತ್ತು ಮನಸ್ತಾಪದ ಕಾರಣ ನೀಡಿ, ಗಂಗಾವತಿ ತಾಲೂಕಿನ ವಿವಿಧ ಗ್ರಾಮದ ದಂಪತಿಗಳಾದ ದ್ಯಾವಣ್ಣ ನಾಯಕ- ಅನಸೂಯ, ವಿರೇಶ- ಜಾನಕಮ್ಮ, ಶ್ರೀನಿವಾಸ – ತುಳಸಿದೇವಿ, ನಿಂಗಪ್ಪ- ಮಮತಾ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ರು. ಸುಮಾರು ಎರಡು ವರ್ಷಗಳ ವಿಚಾರಣೆ ನಂತರ ನಡೆದ ರಾಷ್ಟ್ರೀಯ ಲೋಕ್ ಅದಾಲತ್‍ನಲ್ಲಿ ನಾಲ್ಕು ಜೋಡಿ ಮತ್ತೆ ಒಂದಾಗಿದೆ.

ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿ ಮತ್ತೇ ಒಂದಾಗಿರೋ ನಾಲ್ಕು ಜೋಡಿ ಕೋರ್ಟ್ ಹಾಲ್‍ನಲ್ಲೇ ಮತ್ತೊಮ್ಮೆ ಹಾರ ಬದಲಾಯಿಸಿಕೊಂಡರು. ಸ್ವತಃ ನ್ಯಾಯಾಧೀಶರು ಮತ್ತು ವಕೀಲರು ಮುಂದೆ ನಿಂತು ಮುಂದಿನ ದಿನದಲ್ಲಿ ಯಾವುದೇ ಮನಸ್ತಾಪ ಇಲ್ಲದಂತೆ ಬದುಕಿ ಅಂತಾ ಹಾರೈಸಿ, ಒಬ್ಬರಿಗೊಬ್ಬರಿಗೆ ಸಿಹಿ ತಿನ್ನಿಸಿ ಹಾರೈಸಿದ್ರು. ಇದನ್ನೂ ಓದಿ: ದೇವರ ಮಾತು ಕೇಳಿ ಹೆಂಡತಿ ಬಿಟ್ಟ ಗಂಡ – ನ್ಯಾಯಾಲಯದಲ್ಲಿ ಮತ್ತೆ ಒಂದಾದರು

ಕೋರ್ಟ್ ಮೆಟ್ಟಿಲೇರಿದ್ದ ಪ್ರಕರಣದಲ್ಲಿ ಗೆದ್ದವ ಸೋತ, ಸೋತವ ಸತ್ತ ಎಂಬ ಗಾದೆ ಜನಜನಿತ. ಆದರೆ ಈ ಲೋಕ್ ಅದಾಲತ್‍ನಲ್ಲಿ ಒಂದಾದ ಈ ಜೋಡಿ ಜೀವನದಲ್ಲಿ ಮತ್ತೆ ಗೆದ್ದಿದ್ದಾರೆ ಎಂದರೂ ತಪ್ಪಾಗದು.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *