ಅಮರನಾಥದಲ್ಲಿ ಭಾರೀ ಮಳೆ – ಸಂಕಷ್ಟದಲ್ಲಿ ಧಾರವಾಡದ ಐವರು ಯಾತ್ರಿಗಳು

By
1 Min Read

ಧಾರವಾಡ: ಅಮರನಾಥದಲ್ಲಿ (Amarnath) ಭಾರೀ ಮಳೆಯಾಗುತ್ತಿದ್ದು (Heavy Rain) ಧಾರವಾಡದಿಂದ (Dharwada) ಹೋಗಿದ್ದ ಐವರು ಸಂಕಷ್ಟದಲ್ಲಿ ಸಿಲುಕಿದ್ದಾರೆ.

ಜುಲೈ 3 ರಂದು ಧಾರವಾಡದಿಂದ ಹೋಗಿದ್ದ ಐವರು ಜುಲೈ 6 ರಂದು ಅಮರನಾಥ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಸಂದರ್ಭದಲ್ಲಿ ವಿಪರೀತ ಮಳೆಯಿಂದ ರಸ್ತೆ ಸಂಪರ್ಕ ಕಡಿತಗೊಂಡಿದೆ.

 

ಸೇನಾ ಪಡೆಯುವರು (Indian Army) ಪ್ರವಾಸಕ್ಕೆ ಬಂದಿದ್ದ ಎಲ್ಲರನ್ನೂ ಪಂಚತರಣಿ (Panchtarni) ಎಂಬಲ್ಲಿ ಖಾಸಗಿಯವರ ಟೆಂಟ್‌ನಲ್ಲಿ ಇರಿಸಿದ್ದಾರೆ. ಅದರಲ್ಲಿ ಧಾರವಾಡದ ರಾಕೇಶ ನಾಝರೆ, ವಿಠ್ಠಲ ಬಾಚಗುಂಡೆ, ನಾಗರಾಜ ಹಳಕಟ್ಟಿ, ಹರೀಶ ಸಾಳುಂಕೆ, ಮಡಿವಾಳಪ್ಪ ಕೊಟಬಾಗಿ ಎಂಬುವವರೂ ಇದ್ದಾರೆ. ಇವರ ಜೊತೆಗೆ ಬೆಂಗಳೂರು, ರಾಯಚೂರು, ಗದಗ ಸೇರದಂತೆ ಕರ್ನಾಟಕದ ಅನೇಕ ಜಿಲ್ಲೆಯ ಜನ ಕೂಡ ಇದ್ದಾರೆ. ಇದನ್ನೂ ಓದಿ: ಹಿಮಾಚಲದಲ್ಲಿ ಭಾರೀ ಮಳೆ – ಕೊಚ್ಚಿ ಹೋಯ್ತು ಕಾರು, ಕುಸಿದು ಬಿದ್ದವು ಅಂಗಡಿಗಳು

 

ವಿಪರೀತ ಮಳೆ ಸುರಿಯುತ್ತಿದ್ದು, ಟೆಂಟ್ ಬಿಟ್ಟು ಹೊರಗಡೆ ಬರಲಾರದ ಸ್ಥಿತಿ ಇದೆ. ಇಲ್ಲಿ ಆಹಾರಕ್ಕೆ ಸಮಸ್ಯೆ ಆಗುತ್ತಿದ್ದು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಪ್ರವಾಸಿಗರನ್ನು ಕರೆತರಲು ವ್ಯವಸ್ಥೆ ಮಾಡಬೇಕು ಎಂದು ಕನ್ನಡಿಗರು ಮನವಿ ಮಾಡಿದ್ದಾರೆ.

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್