ಬೆಳಗಾವಿ: ತಾಲೂಕಿನ ವಂಟಮೂರಿ ಗ್ರಾಮದ ಬಳಿ ಗುರುವಾರ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಇನೋವಾ ಕಾರಿನ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ನಾಲ್ವರು ಸಾವನಪ್ಪಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.
ತಾಲೂಕಿನ ವಂಟಮೂರಿ ಘಾಟ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ದುರ್ಘಟನೆ ಸಂಭವಿಸಿದ್ದು. ಇಜಾಜ್ ಪಠಾಣ, ವಿನಾಯಕ ಪಿರಾಜೆ, ವಿಶ್ವನಾಥ, ಸುಶಾಂತ ಮಾನೆ ಮೃತ ದುರ್ದೈವಿಗಳು.
ಘಟನೆಯಲ್ಲಿ ಓಂಕಾರ ಜಮಖಂಡಿ ಹಾಗೂ ವಿಶ್ವನಾಥ ಗಂಭೀರವಾಗಿ ಗಾಯಗೊಂಡಿದ್ದು ಕೆಎಲ್ಇ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಕಾರಿನಲ್ಲಿದ್ದ ಎಲ್ಲರೂ ಮೂಲತಃ ಚಿಕ್ಕೋಡಿ ನಿವಾಸಿಗಳೆಂದು ಗುರುತಿಸಲಾಗಿದ್ದು, ಚಿಕ್ಕೋಡಿಯ ಕೆಎಲ್ಇ ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳೆಂದು ತಿಳಿದುಬಂದಿದೆ.
ಅಂಬೋಲಿಯಿಂದ ಚಿಕ್ಕೋಡಿಗೆ ಹೊರಟ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಘಟನೆಯಿಂದ ಕಾರು ಸಂಪೂರ್ಣ ನಜ್ಜುಗಯಜ್ಜಾಗಿದೆ. ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಡಿಸಿಪಿ ಅಮರನಾಥ ರೆಡ್ಡಿ ಭೇಟಿ ನೀಡಿ ಪರಶೀಲನೆ ನಡೆಸಿದರು.