4 ಲಕ್ಷ ರೂ.ಮೌಲ್ಯದ ಪಡಿತರ ಅಕ್ಕಿ ಅಕ್ರಮ ಸಂಗ್ರಹ

Public TV
1 Min Read

ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗುರಗುಂಟಾದಲ್ಲಿ ಗೋದಾಮೊಂದರ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಲಕ್ಷಾಂತರ ರೂ ಮೌಲ್ಯದ ಪಡಿತರ ಅಕ್ಕಿಯನ್ನ ಜಪ್ತಿ ಮಾಡಿದ್ದಾರೆ.

ಗುರಗುಂಟಾದ ತಿಮ್ಮಾರೆಡ್ಡಿಗೆ ಸೇರಿದ ಗೋದಾಮಿನಲ್ಲಿ ಪಡಿತರ ಅಕ್ಕಿ ಪತ್ತೆಯಾಗಿದೆ. ಪೊಲೀಸರ ರಕ್ಷಣೆಯೊಂದಿಗೆ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ವೇಳೆ 4,92,600 ರೂ ಮೌಲ್ಯದ 821 ಚೀಲ ಪಡಿತರ ಅಕ್ಕಿ ಜಪ್ತಿ ಮಾಡಲಾಗಿದೆ. ಇದನ್ನೂ ಓದಿ: 500 ರೂಪಾಯಿಗೆ ಕೈ ಮಿಲಾಯಿಸಿದ ಆಶಾ ಕಾರ್ಯಕರ್ತೆಯರು

ಆರೋಪಿ ತಿಮ್ಮಾರೆಡ್ಡಿ ಸ್ಥಳದಿಂದ ಪರಾರಿಯಾಗಿದ್ದಾನೆ. ದಾಳಿ ಹಿನ್ನೆಲೆ ಆಹಾರ ನಿರೀಕ್ಷಕ ಅಬ್ದುಲ್ ರೌಫ್ ದೂರು ದಾಖಲಿಸಿದ್ದು, ಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಬೆಳಗಾವಿಯಲ್ಲಿ ಬಣ ರಾಜಕೀಯ ಬಲು ಜೋರು – ಕತ್ತಿ ಸಭೆಗೆ ಪ್ರತಿಯಾಗಿ ಜಾರಕಿಹೊಳಿ ಮೀಟಿಂಗ್

Share This Article
Leave a Comment

Leave a Reply

Your email address will not be published. Required fields are marked *