ಭಾರೀ ಮಳೆಯಿಂದಾಗಿ ಚಿಕ್ಕೋಡಿಯ 4 ಕೆಳ ಹಂತದ ಸೇತುವೆ ಮುಳುಗಡೆ!

Public TV
1 Min Read

ಚಿಕ್ಕೋಡಿ: ಕೃಷ್ಣಾ ನದಿ ಅಚ್ಚುಕಟ್ಟು ಪ್ರದೇಶದಲ್ಲಿ ಭಾರೀ ಮಳೆ ಮುಂದುವರಿದಿದ್ದು, ಕೃಷ್ಣಾ ಹಾಗೂ ಕೃಷ್ಣೆಯ ಉಪ ನದಿಗಳಾದ ದೂದ ಗಂಗಾ ಹಾಗೂ ವೇದಗಂಗಾ ನದಿಗಳು ತುಂಬಿ ಹರಿಯುತ್ತಿವೆ. ಇದರಿಂದಾಗಿ ಚಿಕ್ಕೋಡಿ ತಾಲೂಕಿನ 4 ಕೆಳ ಹಂತದ ಸೇತುವೆ ಮುಳುಗಡೆಯಾಗಿವೆ.

ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಯಡೂರು- ಕಲ್ಲೋಳ, ವೇದಗಂಗಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಭೋಜ- ಕಾರದಗಾ ಹಾಗೂ ದೂದಗಂಗಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಭೋಜವಾಡ-ಕುನ್ನೂರು, ದತ್ತವಾಡ-ಮಲಿಕವಾಡ ಸೇತುವೆಗಳು ಮುಳುಗಡೆಯಾಗಿದ್ದು ಪರ್ಯಾಯ ಮಾರ್ಗವಾಗಿ ಜನರು ಸಂಚಾರ ಮಾಡುತ್ತಿದ್ದಾರೆ.

ಎರಡು ಕೆಳ ಹಂತದ ಸೇತುವೆಗಳು ಇಂದು ಮುಳುಗಡೆಯಾಗುವ ಸಾಧ್ಯತೆ ಇದೆ. ಹೀಗಾಗಿ 80 ಸಾವಿರ ಕ್ಕೂ ಹೆಚ್ಚು ಕ್ಯೂಸೆಕ್ ನೀರು ಕೃಷ್ಣಾ ನದಿಯ ಒಳ ಹರಿದು ಬರುತ್ತಿದೆ. 60 ಸಾವಿರ ಕ್ಯೂಸೆಕ್ ನೀರನ್ನ ಹಿಪ್ಪರಗಿ ಜಲಾಶಯದ ಮೂಲಕ ಹೊರ ಬಿಡಲಾಗುತ್ತಿದ್ದು, ಈ ಕುರಿತು ನದಿ ತೀರದ ಜನರಲ್ಲಿ ನದಿಗೆ ಇಳಿಯದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *