ಈರುಳ್ಳಿ ಸಾಗಿಸ್ತಿದ್ದ ಲಾರಿಗೆ ಗ್ಯಾಸ್ ಟ್ಯಾಂಕರ್ ಡಿಕ್ಕಿ – ನಾಲ್ವರ ದುರ್ಮರಣ

Public TV
1 Min Read

ಚಿತ್ರದುರ್ಗ: ಈರುಳ್ಳಿ ಸಾಗಿಸುತ್ತಿದ್ದ ಲಾರಿಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ದಾರುಣವಾಗಿ ಮೃತಪಟ್ಟ ಘಟನೆ ಚಿತ್ರದುರ್ಗ ತಾಲೂಕಿನ ದೊಡ್ಡಸಿದ್ದವ್ವನಹಳ್ಳಿ ಗ್ರಾಮದಲ್ಲಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 40ರಲ್ಲಿ ನಡೆದ ಈ ಭೀಕರ ಅಪಘಾತದಲ್ಲಿ ಈರುಳ್ಳಿ ಲಾರಿಗೆ ಪಂಕ್ಚರ್ ಹಾಕುತ್ತಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ರಾಯಚೂರು ಮೂಲದ ಹುಲುಗಪ್ಪ, ಕುಷ್ಟಗಿ ಮೂಲದ ಮಂಜುನಾಥ, ವಿಜಯಪುರ ಮೂಲದ ಕ್ಲೀನರ್ ಸಂಜಯ್, ರೋಣ ಮೂಲದ ಚಾಲಕ ಶರಣಪ್ಪ ಎಂದು ಗುರುತಿಸಲಾಗಿದೆ.

ಗದಗ ಜಿಲ್ಲೆ ರೋಣದಿಂದ ಬೆಂಗಳೂರಿಗೆ ಈರುಳ್ಳಿ ಸಾಗಾಟ ಮಾಡುವ ಸಂದರ್ಭದಲ್ಲಿ ಈ ದುರಂತ ನಡೆದಿದೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಸಿದ್ದರಾಮಯ್ಯ, ಡಿಕೆಶಿಯ ಬೆಂಗಾವಲು ವಾಹನ ಅಪಘಾತ – ಸಿಬ್ಬಂದಿಗೆ ಗಾಯ

Share This Article
Leave a Comment

Leave a Reply

Your email address will not be published. Required fields are marked *