ಉಳ್ಳಾಲದ ನಡುರೋಡಲ್ಲೇ ವ್ಯಕ್ತಿಯನ್ನು ಕೊಚ್ಚಿ ಕೊಚ್ಚಿ ಕೊಂದ್ರು

Public TV
1 Min Read

– ಸಿಸಿಟಿವಿಯಲ್ಲಿ ಸೆರೆಯಾಯ್ತು ರಣಭೀಕರ ಕೊಲೆ

ಮಂಗಳೂರು: ನಗರದ ಹೊರವಲಯದ ಉಳ್ಳಾಲದಲ್ಲಿ ಯುವಕನೊಬ್ಬನನ್ನು ನಡುರಸ್ತೆಯಲ್ಲೇ ನಾಲ್ವರು ಮುಸುಕುಧಾರಿಗಳು ಕತ್ತರಿಸಿ ಹತ್ಯೆ ಮಾಡಿದ್ದಾರೆ.

45 ವರ್ಷದ ಜುಬೇರ್ ಹತ್ಯೆಗೊಳಗಾದ ವ್ಯಕ್ತಿ. ಉಳ್ಳಾಲದ ಮುಕ್ಕಚ್ಚೇರಿ ಮಸೀದಿ ಬಳಿ ಜುಬೇರ್ ಮತ್ತು ಇಲಿಯಾಸ್ ಎಂಬ ಇಬ್ಬರು ನಿಂತಿದ್ದಾಗ ನಾಲ್ವರ ತಂಡ ಮಚ್ಚು ಲಾಂಗ್‍ಗಳಿಂದ ದಾಳಿ ನಡೆಸಿದೆ. ತೀವ್ರವಾಗಿ ಗಾಯಗೊಂಡ ಜುಬೇರ್ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.

ಇಲಿಯಾಸ್ ಎನ್ನುವ ಇನ್ನೊಬ್ಬರ ಕೈ ಕಾಲುಗಳು ಕಟ್ ಆಗಿವೆ. ಜುಬೇರ್ ಕೊಲೆಗೆ ಹಳೇ ದ್ವೇಷವೇ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಈ ರಣಭೀಕರ ಕೊಲೆ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮಂಗಳೂರಲ್ಲಿ ಪದೇ ಪದೇ ಇಂಥ ಹಲ್ಲೆ, ಹತ್ಯೆಗಳು ನಡೀತಾನೇ ಇವೆ. ಆದರೆ ಪೊಲೀಸ್ ಇಲಾಖೆ ಯಾವುದೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *