ಚಿತ್ರದುರ್ಗ: ಜಿಲ್ಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು, ಸ್ಥಳದಲ್ಲೇ ನಾಲ್ವರು ಮೃತಪಟ್ಟ ದಾರುಣ ಘಟನೆ ಜಿಲ್ಲೆಯ ಹಿರಿಯೂರಿನ ಜವಗೊಂಡನಹಳ್ಳಿಯಲ್ಲಿ ಇಂದು ನಸುಕಿನ ಜಾವ ಸಂಭವಿಸಿದೆ.
ಸದ್ಧಾಂ ಹುಸೇನ್(22), ಸದ್ಧಾಂ(21), ತೌಸಿಫ್ ಅಹಮ್ಮದ್(24), ಶಾರೂಕ್ (20). ಸ್ಥಳದಲ್ಲೇ ಮೃತ ದುರ್ದೈವಿಗಳಾಗಿದ್ದು, ಇವರು ತಮಿಳುನಾಡು ಮೂಲದವರಾಗಿದ್ದಾರೆ. ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.
ಕಾರು ಗೋವಾದಿಂದ ತಮಿಳುನಾಡಿಗೆ ವಾಪಸ್ ಆಗುತ್ತಿತ್ತು. ಇದೇ ಸಂದರ್ಭದಲ್ಲಿ ಈ ಘೋರ ದುರಂತ ನಡೆದಿದೆ. ಈ ಸಂಬಂಧ ಹಿರಿಯೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.